Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:27 - ಕನ್ನಡ ಸತ್ಯವೇದವು J.V. (BSI)

27 ಹೀಗೆ ನಾನು ನಿನ್ನ ಪುಂಡಾಟವನ್ನೂ ನೀನು ಐಗುಪ್ತದಲ್ಲಿದ್ದಂದಿನಿಂದ ನಡೆದು ಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:27
9 ತಿಳಿವುಗಳ ಹೋಲಿಕೆ  

ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ಆದರೂ ಇವಳು ತಾನು ಐಗುಪ್ತದೇಶದಲ್ಲಿ ಸೂಳೆಯಾಗಿದ್ದ ತನ್ನ ಎಳೆಪ್ರಾಯವನ್ನು ಜ್ಞಾಪಕಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿ


ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


ಡಕಾಯಿತಿಯವರು ಒಬ್ಬನಿಗೆ ಹೊಂಚುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು ಶೆಕೆವಿುಗೆ ಹೋಗುವವರನ್ನು ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು