Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:47 - ಕನ್ನಡ ಸತ್ಯವೇದವು J.V. (BSI)

47 ಸಭೆಯವರು ಇವರ ಮೇಲೆ ಕಲ್ಲೆಸೆದು ಕತ್ತಿಗಳಿಂದ ಇವರನ್ನು ಸಂಹರಿಸಿ ಇವರ ಗಂಡು ಹೆಣ್ಣುಮಕ್ಕಳನ್ನು ಕೊಂದು ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಸಭೆಯವರು ಇವರ ಮೇಲೆ ಕಲ್ಲೆಸೆದು, ಕತ್ತಿಗಳಿಂದ ಇವರನ್ನು ಸಂಹರಿಸಿ, ಇವರ ಗಂಡು ಮತ್ತು ಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:47
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪತೀರಿಸಿಕೊಳ್ಳುವರು; ನಿನ್ನ ಮೂಗು ಕಿವಿಗಳನ್ನು ಕಿತ್ತುಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡುಹೆಣ್ಣುಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವದು.


ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ ಎಂಬದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಯಾವನಾದರೂ ಪರಪತ್ನಿಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು;


ಮತ್ತು ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು