Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:12 - ಕನ್ನಡ ಸತ್ಯವೇದವು J.V. (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಬಲು ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ತನ್ನ ಕಿಲುಬುಗಳ ಕಲೆಯನ್ನು ತೆಗೆಯಲು ಜೆರುಸಲೇಮ್ ತುಂಬಾ ಕಷ್ಟಪಡಬಹುದು. ಆದರೆ ಆ ಕಿಲುಬು ಹೋಗುವದಿಲ್ಲ. ಬೆಂಕಿಯು ಮಾತ್ರ ಕಿಲುಬನ್ನು ತೆಗೆದುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:12
19 ತಿಳಿವುಗಳ ಹೋಲಿಕೆ  

ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.


ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟಿದ್ದಾರೆ, ತಮಗೋಸ್ಕರ ತೊಟ್ಟಿಗಳನ್ನು, ನೀರು ನಿಲ್ಲದ ಬಿರಿದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ಏಕೆ ದ್ರೋಹವನ್ನು ಹೆಚ್ಚಿಸಿ ಹೆಚ್ಚಿಸಿ ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ತಿದಿಯು ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ, ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವದಿಲ್ಲ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು