Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:14
30 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ.


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಇಸ್ರಾಯೇಲ್ಯರ ನಿತ್ಯಾಧಾರನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಯಾಕಂದರೆ ಅವನು ಪಶ್ಚಾತ್ತಾಪಪಡ ಮನುಷ್ಯನಲ್ಲ ಎಂದು ಹೇಳಿದನು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಜನಾಂಗಗಳೊಳಗೆ ಅವರನ್ನು ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು ನೀನು ದುಡಿದದ್ದನ್ನೆಲ್ಲಾ ಅಪಹರಿಸಿ ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಸೂಳೆತನವು, ಹೌದು ನಿನ್ನ ಪುಂಡಾಟವೂ ಸೂಳೆತನವೂ ಬೈಲಿಗೆ ಬರುವವು.


ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.


ಆದಕಾರಣ ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ ಅವರ ದುರ್ನಡತೆಯನ್ನು ಅವರ ತಲೆಗೇ ಕಟ್ಟಿದ್ದೇನೆ; ಇದು ಕರ್ತನಾದ ಯೆಹೋವನ ನುಡಿ.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸೆನು, ಉಳಿಸೆನು; ಅವರು ಕೂಗಿಕೊಳ್ಳುವ ಮಹಾಶಬ್ದವು ನನ್ನ ಕಿವಿಗೆ ಬಿದ್ದರೂ ಲಾಲಿಸೆನು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಯೆಹೋವನು ಅವನಿಗೆ - ಯೆಹೋವನ ಕೈ ಮೋಟುಗೈಯೋ; ನನ್ನ ಮಾತು ನೆರವೇರುತ್ತದೋ ಇಲ್ಲವೋ ಈಗ ನೀನು ನೋಡುವಿ ಎಂದು ಹೇಳಿದನು.


ದೇವರು ಕರುಣವಿಲ್ಲದೆ ಅವನ ಮೇಲೆ [ತನ್ನ ಬಾಣಗಳನ್ನು] ಎಸೆಯುತ್ತಲಿರುವನು, ಅವನು ಆತನ ಕೈಯಿಂದ ತಪ್ಪಿಸಿಕೊಳ್ಳಲೇಬೇಕೆಂದಿರುವನು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡು ಮಾಡಬೇಕೆಂದು ನಾನು ನಿಷ್ಕರುಣಿಯಾಗಿ ಸಂಕಲ್ಪಿಸಿದಂತೆ


ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು; ಐಗುಪ್ತದ ನಾಶನದಿನದಲ್ಲಿ ಕೂಷ್ಯರಿಗೂ ಸಂಕಟವಾಗುವದು; ಇಗೋ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು