Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:8 - ಕನ್ನಡ ಸತ್ಯವೇದವು J.V. (BSI)

8 ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿತೀರಿಸಲೆಂದು ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ, ರೋಷವನ್ನೆಬ್ಬಿಸುವ ಹಾಗೆ, ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಅದನ್ನು ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಕೆಯು ಸುರಿಸಿದ ರಕ್ತವು ಬರಿದಾದ ಬಂಡೆಯ ಮೇಲೆ ಮುಚ್ಚಲ್ಪಡದಂತೆ ನಾನೇ ಮಾಡಿದೆನು. ನಿರಪರಾಧಿಗಳನ್ನು ಆಕೆ ಕೊಂದದ್ದಕ್ಕೆ ಜನರು ಕೋಪಗೊಂಡು ಆಕೆಯನ್ನು ದಂಡಿಸಲೆಂದು ನಾನು ಹೀಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:8
23 ತಿಳಿವುಗಳ ಹೋಲಿಕೆ  

ಅಯ್ಯೋ, ಅಯ್ಯೋ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾ ಪಟ್ಟಣಕ್ಕೆ ಏನು ದುರ್ಗತಿ ಸಂಭವಿಸಿತು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವದು; ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕಾಡುಮರಗಳ ಮೇಲೆಯೂ ಭೂವಿುಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಆರದೆ ದಹಿಸುವದು.


ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಸುಟ್ಟು ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿ ಆರಿ ಹೋಗುವದೇ ಇಲ್ಲ ಅನ್ನುತ್ತಾನೆ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ದೂಳಿನಂತೆ ಚೆಲ್ಲಿಹೋಗುವದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವದು.


ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು