Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:8 - ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:8
22 ತಿಳಿವುಗಳ ಹೋಲಿಕೆ  

ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಎದೋಮ್ಯರು, ಮೋವಾಬ್ಯರು,


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು;


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ನಾನು ಸೇಯೀರ್‍ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗ ಕೊಟ್ಟಿರುವದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವದಿಲ್ಲ.


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.


ಯೆಹೋವನು ತನ್ನ ಜನರಾದ ಇಸ್ರಾಯೇಲ್ಯರಿಗೆ ದಯಪಾಲಿಸಿದ ಸ್ವಾಸ್ತ್ಯಕ್ಕೆ ಕೈ ಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ ಹೀಗೆ ಹೇಳುತ್ತಾನೆ - ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು