Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:15 - ಕನ್ನಡ ಸತ್ಯವೇದವು J.V. (BSI)

15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ - ನಿನ್ನ ಮಧ್ಯದಲ್ಲಿ ಕೊಲೆಯುಂಟಾಗಿ ಗಾಯಪಟ್ಟವರು ನರಳುತ್ತಿರಲು ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಡೆಯನಾದ ಯೆಹೋವನು ತೂರಿಗೆ ಹೇಳುವುದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಬ್ದ ಕೇಳಿ ನಡುಗುವರು. ಅದು ನಿನ್ನ ಜನರು ಗಾಯಗೊಂಡು ಸಾಯುವಾಗ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:15
11 ತಿಳಿವುಗಳ ಹೋಲಿಕೆ  

ಕರಾವಳಿಯ ಸಮಸ್ತನಿವಾಸಿಗಳು ನಿನ್ನ ಗತಿಗೆ ಬೆಚ್ಚಿಬಿದ್ದಿದ್ದಾರೆ; ರಾಜರು ಮೊಗಗೆಟ್ಟು ರೋಮಾಂಚಿತರಾಗಿದ್ದಾರೆ.


ಎದೋಮ್ಯರು ಧಡಮ್ಮನೆ ಬೀಳಲು ಭೂವಿುಯು ಕಂಪಿಸುವದು; ಗೋಳು ಕೆಂಪುಸಮುದ್ರದವರೆಗೂ ಕೇಳಿಸುವದು!


ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲಜನಾಂಗಗಳು ನಡುಗಿದವು; ಮತ್ತು [ಪೂರ್ವಕಾಲದಲ್ಲಿ] ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.


ಈ ನಿನ್ನ ಪತನದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ ಎಂಬ ಶೋಕಗೀತವನ್ನೆತ್ತುವರು.


ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು.


ನಿನ್ನ ನಾವಿಕರ ಕೂಗಾಟಕ್ಕೆ ಸಮೀಪಪ್ರದೇಶಗಳು ನಡುಗುವವು.


ಯೆಹೋವನು ಭೂಮಂಡಲವನ್ನು ಕಂಪನ ಮಾಡುವದಕ್ಕೆ ಏಳುವಾಗ ಮನುಷ್ಯರು ಆತನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ ನೆಲದ ಹಳ್ಳಕೊಳ್ಳಗಳಲ್ಲಿಯೂ ಸೇರಿಕೊಳ್ಳುವರು.


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂವಿುಯ ಕಟ್ಟಕಡೆಯವರು ನಡುಗಿದರು, ಎಲ್ಲರೂ ನೆರೆದುಬಂದರು.


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.


ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು