Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:16 - ಕನ್ನಡ ಸತ್ಯವೇದವು J.V. (BSI)

16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:16
32 ತಿಳಿವುಗಳ ಹೋಲಿಕೆ  

ಹೌದು, ಬಹುಜನಾಂಗಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಪತನದಿನದಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವೂ ನಡುಗುವನು.


ಯೋನನ ಪ್ರಕಟನೆಯು ನಿನೆವೆಯ ಅರಸನಿಗೆ ಮುಟ್ಟಲು ಅವನು ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತನು.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಡುವಲಿಂದ ನಡುಗುತ್ತಾ ಬರುವರು;


ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ ದುಃಖವೂ ತುಂಬಿರುವವು; ಅವಳು ಹಾಳಾಗಿ ನೆಲದ ಮೇಲೆ ಕೂತುಬಿಡುವಳು.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು ಮಾನಭಂಗವನ್ನೂ ದುಷ್ಕೀರ್ತಿಯನ್ನೂ ಹೊದ್ದುಕೊಳ್ಳಲಿ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಲಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು ನನ್ನ ಕೋಪವನ್ನು ತೀರಿಸಿಕೊಂಡು ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ಉಣ್ಣಿಸುವೆನು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇವಿುನ ಯುವತಿಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಯೆರೂಸಲೇಮೇ, ದೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕೂಡ್ರು! ಸೆರೆಬಿದ್ದ ಚೀಯೋನ್ ಕನ್ಯೆಯೇ, ನಿನ್ನ ಕತ್ತಿನ ಪಾಶವನ್ನು ಬಿಚ್ಚಿಬಿಡು!


ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವದು.


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಶಪಿಸುವದೇ ಅವನಿಗೆ ವಸ್ತ್ರವಾಗಿತ್ತು. ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಿತು.


ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು;


ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂವಿುಯ ಕಟ್ಟಕಡೆಯವರು ನಡುಗಿದರು, ಎಲ್ಲರೂ ನೆರೆದುಬಂದರು.


ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವದಕ್ಕೂ ಬೆಚ್ಚಿಬೀಳುವದಕ್ಕೂ ಆಸ್ಪದವಾಗಿದೆ.


ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.


ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ನೀನು ನಿನ್ನ ಸೊಬಗಿನ ನಿವಿುತ್ತ ಉಬ್ಬಿದ ಮನಸ್ಸುಳ್ಳವನಾಗಿ ನಿನ್ನ ಮೆರೆತದಿಂದ ನಿನ್ನ ಬುದ್ಧಿಯನ್ನು ಹಾಳುಮಾಡಿಕೊಂಡಿ; ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗುವಂತೆ ಅವರ ಕಣ್ಣಮುಂದೆ ಹಾಕಿದೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಆ ವೃಕ್ಷವು ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆನು; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ ನದಿಯ ಶಾಖೆಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂವಿುಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು