Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:16 - ಕನ್ನಡ ಸತ್ಯವೇದವು J.V. (BSI)

16 ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:16
12 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಿನ್ನ ಸೇವಕನಾದ ನಾನು ಅರಾಮ್‍ದೇಶದ ಗೆಷೂರಿನಲ್ಲಿದ್ದಾಗ - ಯೆಹೋವನು ನನ್ನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡುವದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೆನು ಎಂದು ವಿಜ್ಞಾಪಿಸಲು


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.


ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಹತಿಸಿದನು.


ಯಾಕೋಬನು ಪದ್ದನ್ಅರಾವಿುಗೆ ಹೊರಟು ಅರಾಮ್ಯನಾದ ಬೆತೂವೇಲನ ಮಗನಾಗಿಯೂ ಯಾಕೋಬನಿಗೂ ಏಸಾವನಿಗೂ ತಾಯಿಯಾದ ರೆಬೆಕ್ಕಳ ಅಣ್ಣನಾಗಿಯೂ ಇದ್ದ ಲಾಬಾನನ ಬಳಿಗೆ ಹೋದನು.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.


ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದಿ.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದಿ.


ನಿನ್ನ ಕೆಟ್ಟತನವು ಬೈಲಿಗೆ ಬರುವದಕ್ಕೆ ಮೊದಲು ಆ ನಿನ್ನ ಗರ್ವಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು