Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:22 - ಕನ್ನಡ ಸತ್ಯವೇದವು J.V. (BSI)

22 ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:22
11 ತಿಳಿವುಗಳ ಹೋಲಿಕೆ  

ಕೂಷನ ಸಂತಾನದವರು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬ ಜನಾಂಗಗಳು.


ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು.


ಅವನು ಬಾಳಲಿ; ಶೆಬಾ ಪ್ರಾಂತದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳುಂಟಾಗಲಿ.


ತಾರ್ಷೀಷ್‍ಪ್ರಾಂತದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಕೂಷನ ಸಂತಾನದವರು - ಸೆಬ, ಹವೀಲ, ಸಬ್ತ, ರಮ್ಮ, ಸಬ್ತೆಕ ಎಂಬವರು. ರಮ್ಮ ಸಂತಾನದವರು - ಶೆಬ, ದೆದಾನ್ ಎಂಬ ಜನಾಂಗಗಳು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ - ನೀವು ಹೋಗಲೇಬೇಕಾಗಿದ್ದರೆ ಒಂದು ಕೆಲಸ ಮಾಡಿರಿ; ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಸಾಮಾನಿನಲ್ಲಿಟ್ಟು, ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ; ಸ್ವಲ್ಪ ತೈಲ, ಸ್ವಲ್ಪ ದ್ರಾಕ್ಷಾರಸದ ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಆಕ್ರೋಡು, ಬಾದಾವಿು ಇವುಗಳನ್ನು ತೆಗೆದುಕೊಂಡುಹೋಗಿ ಕೊಡಿರಿ.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಅಲ್ಲಿ ವಿನೋದಪಡುತ್ತಿರುವ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡಿಕರು ನಾಡಾಡಿಗರೊಂದಿಗೆ ಸೇರಿ ಅವರಿಬ್ಬರ ಕೈಗೆ ಕಡಗವನ್ನು ತೊಡಿಸಿ ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು