Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 29:19 - ಕನ್ನಡ ಸತ್ಯವೇದವು J.V. (BSI)

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ರಾಜನಾದ ನೆಬೂಕದ್ನೆಚ್ಚರನಿಗೆ ನಾನು ಈಜಿಪ್ಟ್ ದೇಶವನ್ನು ಕೊಡುವೆನು. ನೆಬೂಕದ್ನೆಚ್ಚರನು ಈಜಿಪ್ಟಿನವರನ್ನು ಸೆರೆಹಿಡಿದು ಕೊಂಡೊಯ್ವನು. ಈಜಿಪ್ಟಿನ ಬೆಲೆಬಾಳುವ ವಸ್ತುಗಳನ್ನೆಲ್ಲಾ ದೋಚುವನು. ಇದು ಅವನ ಸೈನಿಕರ ಸಂಬಳವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 29:19
12 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವದು.


ಖಡ್ಗವು ಐಗುಪ್ತದ ಮೇಲೆ ಬೀಳುವದು; ಅಲ್ಲಿನ ಪ್ರಜೆಗಳು ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವದು ; ಐಗುಪ್ತದ ಲಕ್ಷೋಪಲಕ್ಷ ಪ್ರಜೆಯು ಒಯ್ಯಲ್ಪಡುವದು; ಅದರ ಅಸ್ತಿವಾರವು ಹಾಳಾಗುವದು;


ಇದಲ್ಲದೆ ಐಗುಪ್ತ್ಯರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರನ್ನಾಳುವನು ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ.


ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸಬಂಡೆಯಾಗುವದು; ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ; ಅದು ಜನಾಂಗಗಳಿಗೆ ಸೂರೆಯಾಗುವದು;


ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ


ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನಿಗೂ ಅವನ ಅಸಂಖ್ಯಾತವಾದ ಪ್ರಜೆಗೂ ಹೀಗೆ ನುಡಿ - ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನರು ಯಾರು?


ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ಸೂರೆಗೆಯ್ದು ಕೊಳ್ಳೆಹೊಡೆಯಬೇಕೆಂತಲೂ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಒಟ್ಟುಗೂಡಿ ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು