Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:15 - ಕನ್ನಡ ಸತ್ಯವೇದವು J.V. (BSI)

15 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು ಅವರು ಕೂತಿದ್ದ ಸ್ಥಳದಲ್ಲಿಯೇ ಕೂತುಕೊಂಡೆನು; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಇದ್ದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಸೆರೆಯಾಗಿ ಒಯ್ಯಲ್ಪಟ್ಟು ಕೆಬಾರ್ ನದಿಯ ಹತ್ತಿರ ತೇಲ್ ಆಬೀಬಿನಲ್ಲಿ ವಾಸವಾಗಿದ್ದವರ ಬಳಿಗೆ ಬಂದು, ಅವರು ಕುಳಿತುಕೊಂಡಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆನು; ಏಳು ದಿನಗಳವರೆಗೂ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ಧನಾಗಿ ಉಳಿದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕೆಬಾರ್ ಕಾಲುವೆ ಪಕ್ಕದಲ್ಲಿದ್ದ ತೇಲ್ ಆಬೀಬ್‌ನಲ್ಲಿ ಸೆರೆಯಾಳುಗಳಾಗಿದ್ದ ಇಸ್ರೇಲ್ ಜನರ ಬಳಿಗೆ ನಾನು ಒಯ್ಯಲ್ಪಟ್ಟೆನು. ಅಲ್ಲಿದ್ದ ಜನರ ಮಧ್ಯೆ ನಾನು ಏಳು ದಿವಸ ಸ್ತಬ್ಧನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:15
10 ತಿಳಿವುಗಳ ಹೋಲಿಕೆ  

ನಾವು ಬಾಬೆಲ್ ದೇಶದ ನದಿಗಳ ಬಳಿಯಲ್ಲಿ ಕೂತುಕೊಂಡು ಚೀಯೋನನ್ನು ನೆನಸಿ ಅತ್ತೆವು.


ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತು ಅವನ ಸಂಗಡ ಒಬ್ಬರೂ ಮಾತಾಡದೆಯೇ ಇದ್ದರು.


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ಅದು ನನಗೆ ಕೇಳಿಸಲು ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ವಿಪತ್ಕಾಲವು ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವಾಗ ನಾನು ಅದನ್ನು ತಾಳ್ಮೆಯಿಂದ ಕಾದಿರಬೇಕೆಂದು ನನಗೆ ತಿಳಿಯಲು ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು.


ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.


ಪ್ರವಾದಿಗಳ ವಿಷಯ. ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ ಯಾಜಕನೂ ಆದ ಯೆಹೆಜ್ಕೇಲನಿಗೆ ಸಾಕ್ಷಾತ್ತಾಗಿ ಒದಗಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು