Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:23 - ಕನ್ನಡ ಸತ್ಯವೇದವು J.V. (BSI)

23 ನಾನೆದ್ದು ಬೈಲುಸೀಮೆಗೆ ಹೊರಟುಹೋದಾಗ ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತದರ್ಶನವು ಆದಂತೆ ಆಹಾ, ಅಲ್ಲಿಯೂ ಯೆಹೋವನ ಮಹಿಮೆಯು ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಎದ್ದು ಬಯಲು ಸೀಮೆಗೆ ಹೊರಟುಹೋದೆನು. ಯೆಹೋವನ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ಅಡ್ಡಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಾನೆದ್ದು ಬಯಲು ಸೀಮೆಗೆ ಹೋದೆನು. ಕೆಬಾರ್ ನದಿಯ ಪಕ್ಕದಲ್ಲಿ ನಾನು ಕಂಡ ಮಹಿಮೆಯಂತಿದ್ದ ಯೆಹೋವನ ಮಹಿಮೆಯು ಅಲ್ಲಿ ಇತ್ತು. ನಾನು ನನ್ನ ಮುಖವನ್ನು ನೆಲಕ್ಕೆ ತಾಗಿಸಿ ಬಗ್ಗಿ ನಮಸ್ಕರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:23
18 ತಿಳಿವುಗಳ ಹೋಲಿಕೆ  

ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು -


ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.


ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಯೆಹೋವನು ಕೂಗಿ ಅವನಿಗೆ -


ಸಮೂಹದವರೆಲ್ಲರೂ ಹೀಗೆ ಮೋಶೆ ಆರೋನರಿಗೆ ವಿರೋಧವಾಗಿ ಕೂಡಿದ್ದಾಗ ದೇವದರ್ಶನದ ಗುಡಾರದ ಕಡೆಗೆ ನೋಡಲಾಗಿ ಆಹಾ, ಮೇಘವು ಅದನ್ನು ಮುಚ್ಚಿಕೊಂಡಿತು, ಮತ್ತು ಯೆಹೋವನ ತೇಜಸ್ಸು ಹೊಳೆಯಿತು.


ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು.


ಆಹಾ, ಇಸ್ರಾಯೇಲಿನ ದೇವರ ಮಹಿಮಾದ್ಭುತದರ್ಶನವು ಬೈಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.


ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.


ಬಳಿಕ ಆ ಪುರುಷನು ಬಡಗಣ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರತಂದನು; ಆಹಾ, ನಾನು ನೋಡಲಾಗಿ ಯೆಹೋವನ ತೇಜಸ್ಸು ಯೆಹೋವನ ಆಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆನು.


ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು