Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 30:14 - ಕನ್ನಡ ಸತ್ಯವೇದವು J.V. (BSI)

14 ನಾನು ಪತ್ರೋಸನ್ನು ಹಾಳುಮಾಡಿ ಚೋವನಿಗೆ ಬೆಂಕಿಯಿಕ್ಕಿ ನೋಪುರವನ್ನು ದಂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಪತ್ರೋಸನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಡುವೆನು. ನೋಪುರವನ್ನು ದಂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪತ್ರೋಸನ್ನು ನಾನು ಬರಿದಾಗಿ ಮಾಡುವೆನು. ಸೋನಿನಲ್ಲಿ ಬೆಂಕಿಯನ್ನು ಬರಮಾಡುವೆನು. ತೆಬೆಸವನ್ನು ನಾನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 30:14
17 ತಿಳಿವುಗಳ ಹೋಲಿಕೆ  

ಅವರ ಜನ್ಮಭೂವಿುಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನೋ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸಿ


ಬಿಡಿಸುವ ಸಮಯದಲ್ಲಿ ಆತನು ಐಗುಪ್ತದಲ್ಲಿ ಮಹತ್ಕಾರ್ಯಗಳನ್ನೂ ಸೋನ್ ಸೀಮೆಯಲ್ಲಿ ಅದ್ಭುತಗಳನ್ನೂ ನಡಿಸಿದ್ದೂ ಹೇಗಂದರೆ -


ಐಗುಪ್ತ ದೇಶದ ಸೋನ್ ಸೀಮೆಯಲ್ಲಿ ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡಿಸಿದನು.


ನೀನು ನೋ ಆಮೋನಿಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು, ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವೃದ್ಧರ ಆಲೋಚನೆಯೂ ಹುಚ್ಚಾಟ; ನೀವು ಫರೋಹನಿಗೆ - ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜವಂಶೀಯನು ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ? ನಿನ್ನ ಜ್ಞಾನಿಗಳು ಎಲ್ಲಿ?


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಆ ಫರೋಹನ ಸಾಮಂತ ರಾಜರು ಚೋವನಿನಲ್ಲಿದ್ದರೂ ಅವನ ದೂತರು ಹಾನೇಸಿನ ತನಕ ಸೇರಿದರೂ


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಚೋಯನಿನ ಪ್ರಭುಗಳು ಬುದ್ಧಿಗೆಟ್ಟಿದ್ದಾರೆ, ನೋಫಿನ ಪ್ರಧಾನರು ಮೋಸಹೋಗಿದ್ದಾರೆ, ಐಗುಪ್ತದ ಕುಲಗಳ ಪ್ರಮುಖರು ಅದನ್ನು ಭ್ರಮಗೊಳಿಸಿದ್ದಾರೆ.


ಐಗುಪ್ತದೇಶದ ವಿುಗ್ದೋಲ್, ತಹಪನೇಸ್, ನೋಫ್ ಎಂಬ ಪಟ್ಟಣಗಳಲ್ಲಿಯೂ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ -


ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಐಗುಪ್ತದಲ್ಲಿಯೂ ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು -


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುವೆನು; ಅವನು ಅದರ ಜನ ಯಾವತ್ತನ್ನು ಒಯ್ದು ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಂಬಳ.


ನಾನು ಐಗುಪ್ತಕ್ಕೆ ಬೆಂಕಿಹಚ್ಚಿ ಅದರ ಸಹಾಯಕರನ್ನೆಲ್ಲಾ ನಾಶಮಾಡಿದ ಮೇಲೆ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.


ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣಸಂಕಟಪಡುವದು; ನೋಪುರವು ಭಂಗಕ್ಕೆ ಈಡಾಗುವದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು