Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:2 - ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕಗೀತವನ್ನೆತ್ತಿ ಅವನಿಗೆ ಹೀಗೆ ನುಡಿ - ನೀನು ಜನಾಂಗಗಳಲ್ಲಿ ಮೃಗರಾಜನೆನಿಸಿಕೊಂಡಿದ್ದಿ; ಇಗೋ ಮಹಾನದಿಯಲ್ಲಿನ ಪೇರ್ಮೊಸಳೆಯಾಗಿಬಿಟ್ಟಿ; ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ : “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಈಜಿಪ್ಟಿನ ರಾಜನಾದ ಫರೋಹನಿಗೆ ಈ ಶೋಕಗೀತೆಯನ್ನು ಹಾಡು. ಅವನಿಗೆ ಹೀಗೆ ಹೇಳು: “‘ಜನಾಂಗಗಳ ಮಧ್ಯೆ ಹೆಮ್ಮೆಯಿಂದ ನಡೆದಾಡುತ್ತಿರುವ ಮೃಗರಾಜನಂತೆ ನೀನಿರುವೆ ಎಂದು ನೀನು ಭಾವಿಸಿದ್ದೆ. ಆದರೆ ನಿಜವಾಗಿಯೂ ನೀನು ಸರೋವರದಲ್ಲಿರುವ ಪೇರ್ಮೊಸಳೆಯಾಗಿರುವೆ. ನೀರಿನ ಹೊಳೆಗಳಲ್ಲಿ ನೀನು ನಿನ್ನ ದಾರಿಯನ್ನು ಮಾಡುವೆ. ನಿನ್ನ ಕಾಲುಗಳಿಂದ ಆ ನೀರನ್ನು ನೀನು ಕೆಸರಾಗಿ ಮಾಡುವೆ. ನೀನು ಈಜಿಪ್ಟಿನ ಹೊಳೆಗಳನ್ನು ಕದಡಿಸುವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:2
27 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕಗೀತವನ್ನೆತ್ತು, ಅದಕ್ಕೆ ಹೀಗೆ ನುಡಿ -


ಶೆಬದವರೂ ದೆದಾನಿನವರೂ ತಾರ್ಷೀಷಿನ ವರ್ತಕರೂ ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ - ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು ದನ ಮುಂತಾದ ಸೊತ್ತನ್ನು ಅಪಹರಿಸಿ ಅಪಾರವಾದ ಆಸ್ತಿಯನ್ನು ಸುಲಿದುಕೊಂಡುಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯಾ ಎಂದು ಕೇಳುವರು.


[ಟಗರುಹೋತಗಳೇ,] ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ವಿುಕ್ಕ ಮೇವನ್ನು ತುಳಿದು ಕಾಲಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ವಿುಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?


ಪ್ರಲಾಪಿಸುವವರು ಈ ಶೋಕಗೀತವನ್ನೆತ್ತಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಐಗುಪ್ತಕ್ಕಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತವನ್ನು ಹಾಡಲಿ; ಇದು ಕರ್ತನಾದ ಯೆಹೋವನ ನುಡಿ.


ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ.


ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಅವರು ರೋದನಮಾಡುತ್ತಾ ನಿನ್ನ ವಿಷಯವಾಗಿ ಶೋಕಗೀತವನೆತ್ತಿ ಹೀಗೆ ಪ್ರಲಾಪಿಸುವರು - ಸಮುದ್ರದ ನಡುವೆ ಬಿಕೋ ಎನ್ನುವ ತೂರಿಗೆ ಯಾವದು ಸಮಾನ?


ಐಗುಪ್ತವೇ ನೈಲಿನಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ; ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣನಿವಾಸಿಗಳನ್ನು ನಾಶಮಾಡುವೆನು ಅಂದುಕೊಳ್ಳುತ್ತದೆ.


ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆ ಹೊರಡುವಂತೆಯೂ ನಮ್ಮ ರೆಪ್ಪೆಗಳೊಳಗಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳೆತ್ತಲಿ.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ಪುರಾತನದ ತಲಾಂತರಗಳಲ್ಲಿ, ಎಚ್ಚರಪಟ್ಟಂತೆ ಈಗಲೂ ಎಚ್ಚತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟ ತೋಳು ನೀನಲ್ಲವೆ;


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ; ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲಿದ್ದೀ. ಅವನು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದ್ದಾನೆ; ಮೃಗೇಂದ್ರನಿಗೆ ಸಮಾನನಾದ ಇವನನ್ನು ಕೆಣಕುವದು ಯಾರಿಂದಾದೀತು?


ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು.


ನೀನು ನನ್ನ ಮೇಲೆ ಕಾವಲಿಡುವದೇಕೆ? ನಾನು ಸಮುದ್ರವೋ [ಸಾಗರವೆಂಬ] ಘಟಸರ್ಪವೋ?


ದುಷ್ಟರಿಂದ ಸೋತ ಶಿಷ್ಟನು ಹಾಳು ಬಾವಿ, ತುಳಿದಾಡಿದ ಒರತೆ.


ನೈಲ್ ನದಿಯಂತೆ ಉಬ್ಬಿರುವದು ಇದೇನು? ನೈಲಿನ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾವದು?


ಇವರು ನಿನ್ನ ವಿಷಯದಲ್ಲಿ - ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದರು!


ಆ ರಾಜ್ಯವು ಸಮಸ್ತರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವದು; ವಿುಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಗತಿಗೆ ತರುವೆನು.


ಮಾಂಸದ ಮಡತೆಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.


ಯಾವದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು