Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:24 - ಕನ್ನಡ ಸತ್ಯವೇದವು J.V. (BSI)

24 ಏಲಾಮು ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಏಲಾಮು ಕೂಡಾ ಅಲ್ಲಿದೆ. ಆಕೆಯ ಸೈನ್ಯವೆಲ್ಲಾ ಆಕೆಯ ಸಮಾಧಿಯ ಸುತ್ತಲಿದೆ. ಅವರೆಲ್ಲಾ ಯುದ್ಧದಲ್ಲಿ ಮಡಿದರು. ಆ ಪರದೇಶದವರು ಪಾತಾಳವನ್ನು ಸೇರಿದರು. ಅವರು ಜೀವಿಸಿದ್ದಾಗ ಜನರನ್ನು ಭಯಗೊಳಿಸಿದರು. ಆದರೆ ಈಗ ನಾಚಿಕೆಯೊಂದಿಗೆ ಅವರು ಪಾತಾಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:24
29 ತಿಳಿವುಗಳ ಹೋಲಿಕೆ  

ಉತ್ತರದೇಶದ ಸಕಲಪ್ರಭುಗಳೂ ಸಮಸ್ತ ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.


ಏಲಾಮು ಮಲಗುವದಕ್ಕೆ ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ; ಸಂಹೃತರ ಮಧ್ಯದಲ್ಲೇ ಏಲಾವಿುಗೆ ಸ್ಥಳವು ಏರ್ಪಾಟಾಗಿದೆ.


ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿದ್ದೀಯಷ್ಟೆ.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರೇ.


ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡದು, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


ಜಿಮ್ರಿಯ ಎಲ್ಲಾ ಅರಸರು, ಏಲಾವಿುನ ಎಲ್ಲಾ ಅರಸರು,


ಆ ದಿವಸಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು. ಏಲಾವಿುನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು


ನೀನು ಮಾನವನ್ನಲ್ಲ, ಅವಮಾನವನ್ನು ತುಂಬಾ ಅನುಭವಿಸುವಿ; ನೀನೂ ಕುಡಿ, ನಿನ್ನ ಸುನ್ನತಿಹೀನತೆಯನ್ನು ಹೊರಪಡಿಸಿಕೋ; ಯೆಹೋವನ ಬಲಗೈಯಲ್ಲಿನ ಪಾತ್ರೆಯು ನಿನ್ನ ಪಾಲಿಗೂ ಬರುವದು; ಕೇವಲ ಅವಮಾನವು ನಿನ್ನ ಮಾನವನ್ನು ಮುತ್ತಿಬಿಡುವದು.


ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.


ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಪಾತಾಳದೊಳಗಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು ಅಂದುಕೊಳ್ಳುವರು.


ನೀರಾವರಿಯ ಯಾವ ಮರಗಳೂ ತಮ್ಮ ನೀಳವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದಿರಲೆಂದೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ನಿಗುರಿಕೊಳ್ಳದಿರಲೆಂದೂ ಹೀಗಾಯಿತು; ಅವೆಲ್ಲಾ ಮರಣದ ಪಾಲಾಗುವವು, ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ಅದರ ಕ್ರಯವು ಯಾರಿಗೂ ಗೊತ್ತಿಲ್ಲ, ಜೀವಲೋಕದಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. [ಅರಾಮ್ ಸಂತಾನದವರು] - ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರೇ.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ನಾನು ಇನ್ನು ಜೀವಲೋಕದವನಾಗಿ ಯಾಹು ಯೆಹೋವನ ದರ್ಶನವನ್ನು ಹೊಂದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನಲ್ಲಾ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.


[ಐಗುಪ್ತವೇ,] ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಇಳಿದು ಹೋಗಿ ಸುನ್ನತಿಹೀನರ ನಡುವೆ ಒರಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು