Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:11 - ಕನ್ನಡ ಸತ್ಯವೇದವು J.V. (BSI)

11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆಗ ನೀನು ಅವರಿಗೆ ಹೀಗೆ ಹೇಳಬೇಕು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನನ್ನ ಜೀವದಾಣೆ, ನಾನು ಜನರು ಸಾಯುವುದನ್ನು ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ಆ ದುಷ್ಟರು ನನ್ನ ಕಡೆಗೆ ತಿರುಗಬೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನ್ನು ಬಿಟ್ಟು ನಿಜವಾದ ಜೀವನವನ್ನು ನಡೆಸಬೇಕು. ಆದ್ದರಿಂದ ನನ್ನ ಬಳಿಗೆ ಹಿಂದಿರುಗಿ ಬನ್ನಿರಿ. ದುಷ್ಟತನವನ್ನು ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:11
35 ತಿಳಿವುಗಳ ಹೋಲಿಕೆ  

ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.


ಕರ್ತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ತಡಮಾಡುತ್ತಾನೆಂಬದಾಗಿ ಕೆಲವರು ಅರ್ಥಮಾಡಿಕೊಳ್ಳುವ ಪ್ರಕಾರ ಆತನು ತಡಮಾಡುವವನಲ್ಲ. ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನನ್ನು ಸೇರಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮದ ಗತಿಗೆ ಹೇಗೆ ತರಲಿ! ಚೆಬೋಯೀವಿುನಂತೆ ಹೇಗೆ ನಾಶಮಾಡಲಿ! ನನ್ನೊಳಗೆ ಮನಸ್ಸು ತಿರುಗಿತು, ಕರುಳು ತೀರಾ ಮರುಗಿತು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ.


ನಾವು ಸಾಯುವವರು; ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡಲಾರದ ನೀರಿನಂತಿದ್ದೇವೆ. ಮನುಷ್ಯರ ಪ್ರಾಣವನ್ನು ತೆಗೆಯುವದಕ್ಕೆ ದೇವರಿಗೆ ಇಷ್ಟವಿಲ್ಲ; ತಳ್ಳಲ್ಪಟ್ಟವನು ತಿರಿಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದಾಗ್ಯೂ ನನ್ನ ಜೀವದಾಣೆ, ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.


ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದ ಹಾಗೂ ಉನ್ನತನಾದವನೊಬ್ಬನು ಬರುವನು.


ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತು ಹಾಕುತ್ತಿದ್ದೆನು!


ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನು ಹೇಳುವದೇನಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಅಂದುಕೊಂಡ ಪ್ರಕಾರವೇ ನಾನು ಮಾಡುತ್ತೇನೆ;


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ನನ್ನ ಜೀವದಾಣೆ, ಎಲ್ಲರೂ ನನಗೆ ಅಡ್ಡ ಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆ ಮಾಡುವರು ಎಂಬದಾಗಿ ಕರ್ತನು ಹೇಳಿದ್ದಾನೆ ಎಂದು ಬರೆದದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.


ಇಂಥ ಸರ್ವಶಕ್ತನನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ ಪರಿಪೂರ್ಣಧರ್ಮವನ್ನಾಗಲಿ ಕುಂದಿಸುವದಿಲ್ಲ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಹೀಗಿರಲು ಸೇನಾಧೀಶ್ವರಸ್ವಾವಿುಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ - ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವದೇಕೆ? ಈ ದುರಾಚಾರದ ನಿವಿುತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯರು.


ಯೆಹೋವನು ಇಂತೆನ್ನುತ್ತಾನೆ - ಈಗಲಾದರೋ ನೀವು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಂಡು ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ;


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡಿಸುತ್ತಾ ನನ್ನನ್ನು ಕೆಣಕುವದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪದೂಷಣೆಗಳಿಗೆ ಗುರಿಯಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು