Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:13 - ಕನ್ನಡ ಸತ್ಯವೇದವು J.V. (BSI)

13 ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನೀತಿವಂತನಿಗೆ, ‘ನೀನು ಖಂಡಿತವಾಗಿ ಬದುಕುವಿ’ ಎಂದು ಹೇಳುವಾಗ, ಅವನು ತನ್ನ ನೀತಿಯ ಮೇಲೆ ಭರವಸವಿಟ್ಟು ಪಾಪ ಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಒಂದುವೇಳೆ ‘ನೀನು ಜೀವಿಸುವಿ’ ಎಂದು ಒಬ್ಬ ಒಳ್ಳೆಯ ಮನುಷ್ಯನಿಗೆ ನಾನು ಹೇಳಬಹುದು. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ತಾನು ರಕ್ಷಿಸಲ್ಪಟ್ಟಿದ್ದೇನೆ ಎಂದು ನೆನಸಬಹುದು. ಆ ಬಳಿಕ ಅವನು ದುಷ್ಕೃತ್ಯಗಳನ್ನು ಮಾಡಲು, ನಾನು ಅವನ ಪುಣ್ಯಕಾರ್ಯಗಳನ್ನು ನೋಡದೆ ಅವನ ದುಷ್ಕೃತ್ಯಗಳ ನಿಮಿತ್ತ ಅವನನ್ನು ಸಾಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:13
11 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು