Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 33:25 - ಕನ್ನಡ ಸತ್ಯವೇದವು J.V. (BSI)

25 ಆದದರಿಂದ ನೀನು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ, ಬೊಂಬೆಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ನೀನು ಅವರಿಗೆ ಹೀಗೆ ಹೇಳಬೇಕು. ನಿಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನೀವು ರಕ್ತವಿರುವ ಮಾಂಸವನ್ನು ತಿನ್ನುತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ಈ ದೇಶವನ್ನು ನಿಮಗೆ ಹೇಗೆ ಕೊಡಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 33:25
29 ತಿಳಿವುಗಳ ಹೋಲಿಕೆ  

ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.


ಆದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಬಾರದು; ರಕ್ತವು ಜೀವವಷ್ಟೆ.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯನುಸಾರ ನಿನ್ನಲ್ಲಿ ರಕ್ತಸುರಿಸುತ್ತಲೇ ಇದ್ದಾರೆ.


ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ


ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವು ಎಂದು ಹೇಳಿದರು.


ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.


ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿನ್ನದೆ ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ ನೆರೆಯವನ ಹೆಂಡತಿಯನ್ನು ಕೆಡಿಸದೆ


ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಯಾವನು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ ಮೋಸಪ್ರಮಾಣಮಾಡದೆ ಶುದ್ಧಹಸ್ತವೂ ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಆದರೆ ರಕ್ತವು ಜೀವಾಧಾರವಾದದರಿಂದ ಮಾಂಸದೊಡನೆ ರಕ್ತವನ್ನು ಭುಜಸಲೇ ಕೂಡದೆಂಬದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ;


ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂವಿುಯ ಮೇಲೆ ಸುರಿದುಬಿಡಬೇಕು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.


ಯಾವನಾದರೂ ಅಶುದ್ಧನಾಗಿದ್ದು ಯೆಹೋವನಿಗೆ ಸಮರ್ಪಿತವಾದ ಸಮಾಧಾನಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವನಿಗಾದರೂ ಮನುಷ್ಯ ದೇಹದಿಂದುಂಟಾದ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು ಇವುಗಳಲ್ಲಿ ಯಾವದಾದರೂ ಸೋಂಕಿದರೆ ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ಕುಲದಿಂದ ತೆಗೆದುಹಾಕಲ್ಪಡಬೇಕು.


ಮತ್ತು ನಾನು ನಿಮ್ಮ ಎಲ್ಲಾ ಸಹೋದರರನ್ನು ಅಂದರೆ ಸಮಸ್ತ ಎಫ್ರಾಯೀಮ್ ವಂಶದವರನ್ನು ಎಸೆದುಬಿಟ್ಟ ಹಾಗೆ ನಿಮ್ಮನ್ನೂ ನನ್ನ ಕಣ್ಣೆದುರಿನಿಂದ ಎಸೆದುಬಿಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ಪುರಿಯೇ! ನಿನ್ನ ಕೇಡಿಗಾಗಿ ಬೊಂಬೆಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!


ಅವರು ದೇಶದ ಮೇಲೆ ರಕ್ತವನ್ನು ಸುರಿಸಿ ತಮ್ಮ ಬೊಂಬೆಗಳಿಂದ ಅದನ್ನು ಹೊಲೆಗೈದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು