Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:32 - ಕನ್ನಡ ಸತ್ಯವೇದವು J.V. (BSI)

32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:32
11 ತಿಳಿವುಗಳ ಹೋಲಿಕೆ  

ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ಆದದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಒಡೆಯನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ ಎಂದು ಹೇಳಿದನು.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು