Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:14 - ಕನ್ನಡ ಸತ್ಯವೇದವು J.V. (BSI)

14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಹೊಗಿಸಿ ನಿಮ್ಮನ್ನು ಬದುಕಿಸಿ ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು ನಡಿಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಯೆಹೋವನ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸ್ವದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:14
18 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನೇ ಬಿದ್ದುಹೋದದನ್ನು ಕಟ್ಟಿ ಹಾಳಾದದನ್ನು ಬೆಳೆಯಿಸಿದ್ದೇನೆಂಬದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವದು; ಯೆಹೋವನಾದ ನಾನೇ ನುಡಿದಿದ್ದೇನೆ, ನಡಿಸುತ್ತೇನೆ.


ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.


ಆಗ ಅತನು ನನಗೆ - ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ನುಡಿ; ಶ್ವಾಸವೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ ಎಂಬದಾಗಿ ಶ್ವಾಸಕ್ಕೆ ನುಡಿ ಎಂದು ಅಪ್ಪಣೆಕೊಡಲು ನಾನು ಅಪ್ಪಣೆಯಂತೆ ನುಡಿದೆನು.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡೀಯೋ, ಕೈಗಳನ್ನು ಬಲಪಡಿಸಿಕೊಂಡೀಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ನಡಿಸುತ್ತೇನೆ.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮವನ್ನು ಹೊದಿಸಿ ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.


ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು