Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 39:4 - ಕನ್ನಡ ಸತ್ಯವೇದವು J.V. (BSI)

4 ನೀನೂ ನಿನ್ನ ಎಲ್ಲಾ ಗುವ್ಮಿುಗಳೂ ನಿನ್ನೊಂದಿಗಿರುವ ಜನಾಂಗಗಳೂ ಇಸ್ರಾಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸತಿನ್ನುವ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನೂ, ನಿನ್ನ ಎಲ್ಲಾ ಸೈನ್ಯದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳಲ್ಲಿ ಬೀಳುವಿರಿ; ನಾನು ನಿಮ್ಮನ್ನು ಹದ್ದುಗಳಿಗೂ, ಪಕ್ಷಿಗಳಿಗೂ ಕಾಡಿನ ಮೃಗಗಳಿಗೂ, ಬಯಲಿನ ಭೂಜಂತುಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 39:4
14 ತಿಳಿವುಗಳ ಹೋಲಿಕೆ  

ಮತ್ತು ಅವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿರುವವರನ್ನು ಖಡ್ಗವು ಹತಿಸುವದು; ಬೈಲಿನಲ್ಲಿರುವವರನ್ನು ನಾನು ಮೃಗಗಳಿಗೆ ತುತ್ತುಮಾಡುವೆನು; ಗುಹೆ ದುರ್ಗಗಳಲ್ಲಿರುವವರನ್ನು ವ್ಯಾಧಿಯು ಸಾಯಿಸುವದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು, ಅಂದರೆ ಕಡಿಯುವದಕ್ಕೆ ಖಡ್ಗವನ್ನು, ಸೀಳುವದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವದಕ್ಕೆ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನೇವಿುಸುವೆನು ಎಂಬದು ಯೆಹೋವನಾದ ನನ್ನ ಮಾತು.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಅಶ್ಶೂರ್ಯರನ್ನು ನನ್ನ ದೇಶದಲ್ಲಿ ಮುರಿದು ನನ್ನ ಬೆಟ್ಟಗಳ ಮೇಲೆ ತುಳಿದುಬಿಡುವೆನು; ಆಗ ಅವರು ಹೂಡಿದ ನೊಗವು ನನ್ನ ಜನರಿಂದ ತೊಲಗಿ ಹೊರಿಸಿದ ಹೊರೆಯು ನನ್ನ ಜನರ ಹೆಗಲಿಗೆ ದೂರವಾಗುವದು.


ಆ ದಿನದಲ್ಲಿ ಯೆಹೋವನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೂ ಬಿದ್ದಿರುವರು; ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣಿಡರು, ಭೂವಿುಯ ಮೇಲೆ ಗೊಬ್ಬರವಾಗುವರು.


ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡ ತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.


ನೀವು ಬೈಲಿನಲ್ಲಿ ಬೀಳುವಿರಿ; ನಾನೇ ಅಪ್ಪಣೆಕೊಟ್ಟಿದ್ದೇನಲ್ಲಾ; ಇದು ಕರ್ತನಾದ ಯೆಹೋವನ ನುಡಿ.


ರಾಹುತರ ರಭಸ, ಥಳಥಳಿಸುವ ಕತ್ತಿ, ವಿುಂಚುವ ಈಟಿ, ಅಸಂಖ್ಯಾತ ಹತರು, ಶವಗಳ ಮಹಾರಾಶಿ! ಸತ್ತವರು ಲೆಕ್ಕವೇ ಇಲ್ಲ, [ನುಗ್ಗುವವರು] ಅವರ ಹೆಣಗಳನ್ನು ಎಡವುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು