Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:16 - ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ದೇವರು ನನಗೆ, “ನರಪುತ್ರನೇ, ನಾನು ಜೆರುಸಲೇಮಿಗೆ ರೊಟ್ಟಿಯ ಸರಬರಾಜನ್ನು ನಿಲ್ಲಿಸುವೆನು. ಜನರಿಗೆ ತಿನ್ನಲು ಕೊಂಚ ರೊಟ್ಟಿ ಸಿಗುವುದು. ಆಹಾರವು ಮುಗಿದು ಹೋಗುತ್ತಿರುವದರಿಂದ ಅವರು ಬಹಳವಾಗಿ ಚಿಂತಿಸುವರು. ಅವರಿಗೆ ಸ್ವಲ್ಪವೇ ಕುಡಿಯುವ ನೀರು ಇರುವುದು. ಆ ನೀರನ್ನು ಕುಡಿಯುವಾಗ ಅವರಿಗೆ ಭಯಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:16
18 ತಿಳಿವುಗಳ ಹೋಲಿಕೆ  

ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ


ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ನರಪುತ್ರನೇ, ಅಪರಾಧವನ್ನು ನಡಿಸಿ ನನಗೆ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ ಅದರ ಜೀವನಾಧಾರವನ್ನು ತೆಗೆದುಬಿಟ್ಟು ಕ್ಷಾಮವನ್ನು ಬರಮಾಡಿ ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ಅನಂತರ ಆತನು ದೇಶದಲ್ಲಿ ಕ್ಷಾಮವನ್ನು ಬರಮಾಡಿ ಆಹಾರವೆಂಬ ಊರುಗೋಲನ್ನು ಮುರಿದುಬಿಟ್ಟನು.


ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.


ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ].


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ಭ್ರಮಣಮದ್ಯವನ್ನು ಕುಡಿಸಿದ್ದೀ.


ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು - ಬಾ ಅನ್ನುವದನ್ನು ಕೇಳಿದೆನು. ಆಗ ಇಗೋ, ಕಪ್ಪು ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು .


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿವಸ


ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ.


ಆತನು ನನಗೆ - ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉಪಯೋಗಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೊ ಎಂದು ಉತ್ತರಕೊಟ್ಟನು.


ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರಸಿಕ್ಕದೆ ಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು