Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:9 - ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಭತ್ತು ದಿನ ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಮತ್ತೆ ಹೇಳಿದ್ದೇನೆಂದರೆ: “ನೀನು ರೊಟ್ಟಿಯನ್ನು ಮಾಡಲು ಕಾಳುಗಳನ್ನು ತರಬೇಕು. ಸ್ವಲ್ಪ ಗೋಧಿ, ಬಾರ್ಲಿ, ಅಲಸಂದೆ, ಸಾವೆ, ಕಡಲೆ ಇವುಗಳನ್ನೆಲ್ಲಾ ಒಂದು ಬೋಗುಣಿಯಲ್ಲಿ ಹಾಕಿ ಬೀಸಿ ಹಿಟ್ಟು ಮಾಡು. ಈ ಹಿಟ್ಟನ್ನು ನಾದಿ ರೊಟ್ಟಿ ಮಾಡು. ನೀನು ಮುನ್ನೂರತೊಂಭತ್ತು ದಿವಸಗಳ ಕಾಲ ನಿನ್ನ ಎಡಮಗ್ಗುಲಲ್ಲಿ ಮಲಗಿರುವಾಗ ಅದನ್ನು ಮಾತ್ರ ತಿನ್ನುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ನೀನು ಗೋಧಿ, ಜವೆಗೋಧಿ, ಅವರೆ, ಅಲಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು, ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು, ನೀನು ಒಂದು ಕಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು, ಮುನ್ನೂರ ತೊಂಬತ್ತು ದಿನಗಳು ಅವರಿಂದಲೇ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:9
5 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು;


ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಯೆಹೋವನ ನುಡಿ.


ಅಂತು ಭೂವಿುಯನ್ನು ಹಸನುಮಾಡಿದ ಮೇಲೆ ಕರಿಯ ಜೀರಿಗೆಯನ್ನು ಚೆಲ್ಲಿ ಜೀರಿಗೆಯನ್ನು ಬಿತ್ತಿ ಗೋದಿಯನ್ನು ಸಾಲು ಸಾಲಾಗಿಯೂ ಜವೆಗೋದಿಯನ್ನು ತಕ್ಕ ಸ್ಥಳದಲ್ಲಿಯೂ ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೆ.


ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು.


ಗೋದಿಯೂ ಕಡಲೆಯೂ ಹಿಂದಿನ ಬೆಳೆಯಾದದರಿಂದ ಅದಕ್ಕೆ ನಷ್ಟವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು