Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:13 - ಕನ್ನಡ ಸತ್ಯವೇದವು J.V. (BSI)

13 ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:13
27 ತಿಳಿವುಗಳ ಹೋಲಿಕೆ  

ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ; ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ಹೋಮಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರೂ ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದರಿಂದ ಪವಿತ್ರಸ್ಥಳದೊಳಗೆ ಅದನ್ನು ತಿನ್ನಬೇಕು.


ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು.


ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.


ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು;


ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.


ಆರೋನನ ಸಂತತಿಯವರಲ್ಲದ ಇತರರಲ್ಲಿ ಯಾರೂ ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು; ಸಮರ್ಪಿಸಿದರೆ ಕೋರಹನಿಗೂ ಅವನ ಜೊತೆಗಾರರಿಗೂ ಉಂಟಾದ ಗತಿಗೆ ಗುರಿಯಾದಾರೆಂದು ಇಸ್ರಾಯೇಲ್ಯರಿಗೆ ನೆನಪು ಹುಟ್ಟಿಸುವದಕ್ಕಾಗಿ ಅದು ಗುರುತಾಯಿತು.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನೂ ಮಹಾಪರಿಶುದ್ಧವಾದದ್ದನ್ನೂ ಅವನು ಊಟಮಾಡಬಹುದೇ ಹೊರತು


ಪ್ರಾಯಶ್ಚಿತ್ತ ಯಜ್ಞನಿಯಮಗಳು. ಆ ಯಜ್ಞವು ಮಹಾಪರಿಶುದ್ಧವಾದದ್ದು.


ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಆ ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ ಅದರ ದ್ವಾರವೂ ಕಾಣಿಸಿದವು; ಆ ಕೋಣೆಯೊಳಗೆ ಸರ್ವಾಂಗಹೋಮಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.


ಪಡುವಲಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಎಪ್ಪತ್ತು ಮೊಳ, ಉದ್ದ ತೊಂಭತ್ತು ಮೊಳ, ಅದರ ಗೋಡೆಯ ದಪ್ಪ ಐದು ಮೊಳ.


ಆಮೇಲೆ ಅವನು ನನ್ನನ್ನು ಬಡಗಲ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗೂ ನಡುವಣ ಕೋಣೆಗಳಿಗೆ ಕರತಂದು


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು