Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:26 - ಕನ್ನಡ ಸತ್ಯವೇದವು J.V. (BSI)

26 ಹೀಗೆ ಏಳು ದಿವಸ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೀಗೆ ಏಳು ದಿವಸ ಬಲಿಪೀಠದ ದೋಷವನ್ನು ಪರಿಹರಿಸುತ್ತಾ, ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಏಳು ದಿವಸಗಳ ತನಕ ಯಾಜಕರು ವೇದಿಯನ್ನು ಪವಿತ್ರ ಮಾಡಬೇಕು ಮತ್ತು ದೇವರನ್ನು ಆರಾಧಿಸುವದಕ್ಕೆ ಸಿದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:26
9 ತಿಳಿವುಗಳ ಹೋಲಿಕೆ  

ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು [ಏಳು ದಿನವೂ] ನಡಿಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.


ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.


ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಸುತ್ತಣ ದಿಂಡಿಗೂ ಹಚ್ಚಿ ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


ಎರಡನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋತವನ್ನು ದೋಷಪರಿಹಾರಕಯಜ್ಞಕ್ಕಾಗಿ ಅರ್ಪಿಸು; ಹೋರಿಯಿಂದ ಯಜ್ಞವೇದಿಯನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.


ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದ ತಂದ ಪೂರ್ಣಾಂಗವಾದ ಟಗರನ್ನೂ ಅರ್ಪಿಸಲಿ.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.


ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವದಕ್ಕೆ ಏಳು ದಿವಸ ಹಿಡಿಯುವದಾದದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಲಿನ ಆಚೆಗೆ ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು