Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:7 - ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:7
38 ತಿಳಿವುಗಳ ಹೋಲಿಕೆ  

ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.


ಏಕಂದರೆ ಸಕಲಜನಾಂಗಗಳವರೂ ಸುನ್ನತಿಹೀನರು, ಎಲ್ಲಾ ಇಸ್ರಾಯೇಲ್ ವಂಶದವರೂ ಹೃದಯ ಸುನ್ನತಿಯಿಲ್ಲದವರು ಎಂದು ಯೆಹೋವನು ಅನ್ನುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರಲ್ಲಿ ಸೇರಿಕೊಂಡಿರುವ ಮ್ಲೇಚ್ಫರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ಯೆಹೂದದವರೇ, ಯೆರೂಸಲೇವಿುನ ನಿವಾಸಿಗಳೇ, ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿ ಯೆಹೋವನಿಗಾಗಿ ಸುನ್ನತಿಯಾಗಿರಿ; ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ಧಗಧಗಿಸುವದು.


ನಾನು ತಮಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶಕ್ಕೆ [ಸೆರೆಯವರನ್ನಾಗಿ] ಬರಮಾಡಬೇಕಾಯಿತೆಂದೂ ಒಪ್ಪಿ ತಮ್ಮ ಮೊಂಡವಾದ ಮನಸ್ಸನ್ನು ನನ್ನ ಆಜ್ಞೆಗೆ ಒಳಪಡಿಸಿ, ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವದಾದರೆ


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.


ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


ಅವರ ಆಭರಣಗಳ ಚಂದವು ಅವರಿಗೆ ಗರ್ವಾಸ್ಪದವಾಯಿತು; ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವದು ಎಂದು ಹೇಳಿದನು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೇ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ


ಬೀಜದೋಷವುಳ್ಳವನಾಗಲಿ ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗಹೀನನೂ ದೇವರ ಆಹಾರವನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು; ಅಂಗಹೀನನು ಈ ಕಾರ್ಯವನ್ನು ವಹಿಸಿಕೊಳ್ಳಲೇಕೂಡದು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.


ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.


ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕ ಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕು; ತರುವಾಯ ಅವನು ಹತ್ತಿರ ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆಯೇ ಇರುವನು; ಆದರೆ ಸುನ್ನತಿ ಮಾಡಿಸಿಕೊಳ್ಳದವನು ಆ ಭೋಜನವನ್ನು ಮಾಡಲೇ ಕೂಡದು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ - ಪಸ್ಕವನ್ನು ಆಚರಿಸಬೇಕಾದ ಕ್ರಮ ಹೇಗಂದರೆ - ಅನ್ಯನೊಬ್ಬನೂ ಅದರಲ್ಲಿ ಭೋಜನ ಮಾಡಬಾರದು.


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ;


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿ ಕಳುಹಿಸಿದ್ದೇನೆಂಬದು ನಿಮಗೆ ಗೊತ್ತಾಗುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು