Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:9 - ಕನ್ನಡ ಸತ್ಯವೇದವು J.V. (BSI)

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡಿಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ; ಇದು ಕರ್ತನಾದ ಯೆಹೋವನ ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿನ ಪ್ರಭುಗಳೇ, ಇನ್ನು ಸಾಕು, ಕೊಳ್ಳೆಯನ್ನೂ ಬಲಾತ್ಕಾರವನ್ನೂ ತ್ಯಜಿಸಿ, ನೀತಿನ್ಯಾಯಗಳನ್ನು ನಡೆಸಿರಿ. ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿರಿ. ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:9
23 ತಿಳಿವುಗಳ ಹೋಲಿಕೆ  

ನೀವು ಮಾಡಬೇಕಾದ ಕಾರ್ಯಗಳು ಇವೇ - ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ ಸಮಾಧಾನಪ್ರದನ್ಯಾಯವನ್ನೂ ಸ್ಥಾಪಿಸಿರಿ;


ಇದಲ್ಲದೆ ನೀನು ಆ ದ್ರೋಹಿಗಳಿಗೆ ಅಂದರೆ ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ -


ಯೆಹೋವನು ಹೀಗನ್ನುತ್ತಾನೆ - ನೀತಿನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ; ವಿದೇಶಿ, ಅನಾಥ, ವಿಧವೆ, ಇವರಿಗೆ ಯಾವ ಅನ್ಯಾಯವನ್ನೂ ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸದಿರಿ.


ಸದಾಚಾರವನ್ನು ಅಭ್ಯಾಸಮಾಡಿರಿ; ನ್ಯಾಯನಿರತರಾಗಿರಿ, ಹಿಂಸಕನನ್ನು ತಿದ್ದಿ ಸರಿಪಡಿಸಿರಿ, ಅನಾಥನಿಗೆ ನ್ಯಾಯತೀರಿಸಿರಿ, ವಿಧವೆಯ ಪಕ್ಷವಾಗಿ ವಾದಿಸಿರಿ.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.


ನನ್ನ ಜನರ ಸ್ತ್ರೀಯರನ್ನು ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಮಹಿಮೆಯ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.


ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಿಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದೀ.


ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.


ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ; ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಬರುತ್ತದೆ; ರೋಗಗಳೂ ವ್ರಣಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.


ಹಿಂಸೆಯು ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ [ಉಳಿಯರು], ಆ ಜನಸಮೂಹದಲ್ಲಿಯೂ ಅವರ ಆಸ್ತಿಯಲ್ಲಿಯೂ [ಶೇಷವೇನೂ ಇರದು]. ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.


ಒಂದು ಸರಪಣಿಯನ್ನು ಮಾಡು; ಏಕಂದರೆ ದೇಶವು ನರಹತ್ಯಭರಿತವಾಗಿದೆ, ಪಟ್ಟಣವು ಬಲಾತ್ಕಾರಪೂರ್ಣವಾಗಿದೆ.


ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.


ದುಷ್ಟನ ಮನೆಯಲ್ಲಿ ದುಷ್ಟತನದಿಂದ ಗಳಿಸಿದ ನಿಧಿ; ಅಸಹ್ಯಕರವಾದ ಕಿರಿಯಳತೆ, ಇವು ಇನ್ನೂ ಸಿಕ್ಕುತ್ತಿವೆಯೋ?


ಸೇನಾಧೀಶ್ವರ ಯೆಹೋವನು ಇಂತೆಂದಿದ್ದಾನೆ - ಸರಿಯಾಗಿ ನ್ಯಾಯತೀರಿಸಿರಿ,


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು