Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಪ್ರಭುವು ಪ್ರಜೆಗಳ ಪಿತ್ರಾರ್ಜಿತ ಭೂವಿುಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು; ಸ್ವಂತ ಭೂವಿುಯನ್ನೇ ಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳಕೊಂಡು ದಿಕ್ಕಾಪಾಲಾಗಿ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಅರಸನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ. ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನು ತನ್ನ ಪ್ರಜೆಯ ಭೂಮಿಯನ್ನು ತನ್ನ ಉಪಯೋಗಕ್ಕೆಂದು ಬಲತ್ಕಾರದಿಂದ ಇಟ್ಟುಕೊಳ್ಳಬಾರದು ಅಥವಾ ತೆಗೆದುಕೊಳ್ಳಲೂಬಾರದು. ತನ್ನ ಸ್ವಂತ ಭೂಮಿಯಿಂದ ಪಾಲನ್ನು ತನ್ನ ಮಕ್ಕಳಿಗೆ ಕೊಡಬೇಕು. ಹೀಗೆ ನನ್ನ ಜನರು ತಮ್ಮ ಭೂಮಿಯನ್ನು ಕಳೆದುಕೊಳ್ಳುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:18
18 ತಿಳಿವುಗಳ ಹೋಲಿಕೆ  

ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತಸುರಿಸಿ ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಅವನಿಗೆ - ನೀನು ಕೊಲೆ ಮಾಡಿ ಸ್ವಾಸ್ತ್ಯವನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು ಎಂಬದೇ.


ಆದದರಿಂದ - ಆತನು ಉನ್ನತಸ್ಥಾನಕ್ಕೆ ಏರಿದಾಗ ತಾನು ಜಯಿಸಿದ್ದ ಬಹುಜನರನ್ನು ಸೆರೆಹಿಡುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಮಾಡಿದನು ಎಂಬದಾಗಿ ಪ್ರವಾದಿಯು ಹೇಳುತ್ತಾನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


[ಟಗರುಹೋತಗಳೇ,] ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿ ಬಿಟ್ಟಿರಿ;


ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ ತನ್ನ ಹಸ್ತಕೌಶಲ್ಯದಿಂದ ನಡಿಸಿದನು.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡುಕೊಂಡು ಹೋಗಿ ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ ಉನ್ನತಸ್ಥಾನಕ್ಕೆ ಏರಿದ್ದೀ. ದೇವನಾದ ಯಾಹುವೇ, ಅಲ್ಲೇ ವಾಸಿಸುವಿ.


ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಎಣ್ಣೇ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.


ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು