Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:20 - ಕನ್ನಡ ಸತ್ಯವೇದವು J.V. (BSI)

20 ಆಗ ಅವನು ನನಗೆ - ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ ಪ್ರಾಯಶ್ಚಿತ್ತಯಜ್ಞಪಶುವಿನ ಮತ್ತು ದೋಷಪರಿಹಾರಕಯಜ್ಞಪಶುವಿನ ಮಾಂಸವನ್ನು ಬೇಯಿಸುವದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವದಕ್ಕೂ ಈ ಸ್ಥಳವು ಏರ್ಪಟ್ಟಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ, ಪ್ರಾಯಶ್ಚಿತ್ತಯಜ್ಞ ಬಲಿಯನ್ನೂ, ಬೇಯಿಸಿದ ಧಾನ್ಯನೈವೇದ್ಯವನ್ನು ಸುಡುವುದಕ್ಕೆ ಏರ್ಪಡಿಸಿರುವ ಪರಿಶುದ್ಧ ಸ್ಥಳವು ಇದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:20
13 ತಿಳಿವುಗಳ ಹೋಲಿಕೆ  

ಆಮೇಲೆ ಲೇವಿಯರು ಪಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟು ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ ಬಾನೆ ಹಂಡೆಗಳಲ್ಲಿ ಬೇಯಿಸಿ ಬೇಗನೆ ತಂದು ಜನರಿಗೆ ಬಡಿಸಿದರು.


ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು.


ಅವರು ಹೊರಗಣ ಪ್ರಾಕಾರಕ್ಕೆ ಅಂದರೆ ಅಲ್ಲಿನ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗಮಾಡದಂತೆ ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಳ್ಳಲಿ.


ತರುವಾಯ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರಕೊಂಡು ಹೋದನು; ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.


ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಆ ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಆಗ ಅವನು ನನಗೆ - ಇವು ದೇವಾಲಯದ ಸೇವಕರು ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು