Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 47:12 - ಕನ್ನಡ ಸತ್ಯವೇದವು J.V. (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲಫಲವೃಕ್ಷಗಳು ಬೆಳೆಯುವವು; ಅವುಗಳ ಎಲೆ ಬಾಡದು, ಹಣ್ಣು ತೀರದು; ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳುತಿಂಗಳಲ್ಲಿಯೂ ಹೊಸಹೊಸ ಫಲವನ್ನು ಕೊಡುತ್ತಲಿರುವವು; ಅವುಗಳ ಹಣ್ಣು ಆಹಾರಕ್ಕೂ ಸೊಪ್ಪು ಔಷಧಕ್ಕೂ ಅನುಕೂಲಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಬೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಆ ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣುಗಳನ್ನು ಕೊಡುವವು. ಯಾಕೆಂದರೆ ಆ ಮರಗಳಿಗೆ ನೀರು ಆಲಯದಿಂದ ಬರುತ್ತದೆ. ಅದರ ಹಣ್ಣುಗಳನ್ನು ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಧಿಯನ್ನೂ ತಯಾರಿಸಬಹುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 47:12
11 ತಿಳಿವುಗಳ ಹೋಲಿಕೆ  

ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನಾನು ಹಿಂದಿರುಗಲು ಆಹಾ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರುವೃಕ್ಷದ ಹಾಗೆ ವೃದ್ಧಿಯಾಗುವರು.


ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು ತೋಟದಲ್ಲೆಲ್ಲಾ ಕವಲೊಡೆದು ಹರಡಿ


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು