Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 48:13 - ಕನ್ನಡ ಸತ್ಯವೇದವು J.V. (BSI)

13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ, ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು; [ಈ ಎರಡು ಪಾಲುಗಳ] ಒಟ್ಟಳತೆ ಎಷ್ಟಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯಾಜಕರ ಭೂಮಿಯ ಪಕ್ಕದಲ್ಲಿ ಲೇವಿಯರ ಪಾಲಿನ ಭೂಮಿ ಇರುವದು. ಇದರ ಉದ್ದ ಇಪ್ಪತ್ತೈದು ಸಾವಿರ ಮೊಳ; ಅಗಲ ಹತ್ತು ಸಾವಿರ ಮೊಳ. ಈ ಎರಡು ಪಾಲುಗಳ ಒಟ್ಟಳತೆ ಇಪ್ಪತ್ತೈದು ಸಾವಿರ ಮೊಳ ಉದ್ದ, ಇಪ್ಪತ್ತು ಸಾವಿರ ಮೊಳ ಅಗಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 48:13
8 ತಿಳಿವುಗಳ ಹೋಲಿಕೆ  

ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.


ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವದು.


ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಒಂದು ಅಂಶವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯವು ಇರಬೇಕು.


ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಜ್ಞಾಪಕವಿರಲಿ.


ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರವು ಅತಿಪವಿತ್ರವೂ ದೇಶದೊಳಗಣ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವದು.


ಆ ಕ್ಷೇತ್ರವು ಯೆಹೋವನಿಗೆ ಮೀಸಲಾದದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಬದಲಾಬದಲಿ ಮಾಡಕೂಡದು, ದೇಶದ ಆ ಶ್ರೇಷ್ಠಾಂಶವು ಪರವಶವಾಗದಿರಲಿ.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅವು ಅವರಿಗೆ ಶಾಶ್ವತವಾದ ಸ್ವಾಸ್ತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು