Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 5:16 - ಕನ್ನಡ ಸತ್ಯವೇದವು J.V. (BSI)

16 ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬರಗಾಲವೆಂಬ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 5:16
12 ತಿಳಿವುಗಳ ಹೋಲಿಕೆ  

ಇದಲ್ಲದೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನಾನು ಯೆರೂಸಲೇವಿುನಲ್ಲಿ ಜೀವನಾಧಾರವನ್ನು ಮುರಿದುಬಿಡುವೆನು, ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಬೆದರಿನಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ಬೆರಗಾಗಿ ಕುಡಿಯುವರು;


ನರಪುತ್ರನೇ, ಅಪರಾಧವನ್ನು ನಡಿಸಿ ನನಗೆ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ ಅದರ ಜೀವನಾಧಾರವನ್ನು ತೆಗೆದುಬಿಟ್ಟು ಕ್ಷಾಮವನ್ನು ಬರಮಾಡಿ ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.


ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಆತನು ಅದಕ್ಕೆ ಮರಣಕರವಾದ ಅಗ್ನಿ ಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವದಕ್ಕೆ ಗುರಿಯಿಟ್ಟು ನಿಂತಿದ್ದಾನೆ.


ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿ ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಅರೆಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.


ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.


ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರುಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿವಸ


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಿನ್ನ ಜೀವನಾಧಾರವನ್ನು ಮುರಿದುಹಾಕುವೆನು; ನಾನು ಕಳುಹಿಸುವ ಕ್ಷಾಮವೂ ದುಷ್ಟಮೃಗಗಳೂ ನಿನಗೆ ಪುತ್ರಶೋಕವನ್ನುಂಟುಮಾಡುವವು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನಲ್ಲಿ ವ್ಯಾಪಿಸುವವು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು