Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:19 - ಕನ್ನಡ ಸತ್ಯವೇದವು J.V. (BSI)

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ತಮ್ಮ ಬೆಳ್ಳಿಯ ವಿಗ್ರಹಗಳನ್ನು ರಸ್ತೆಗೆ ಬಿಸಾಡುವರು, ಅವರು ಬಂಗಾರದ ವಿಗ್ರಹವನ್ನು ಅಶುದ್ಧ ವಸ್ತುವಿನಂತೆ ನೋಡುವರು. ಯೆಹೋವನು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರಗಳ ವಿಗ್ರಹಗಳು ಅವರನ್ನು ರಕ್ಷಿಸಲಾರವು. ಅವು ಅವರ ಹಸಿವನ್ನು ನೀಗಿಸಲಾರವು ಅಥವಾ ಅವರ ಹೊಟ್ಟೆಗಳನ್ನು ತುಂಬಿಸಲಾರವು. ಜನರು ಪಾಪದಲ್ಲಿ ಬೀಳುವಂತೆ ಅವು ಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:19
21 ತಿಳಿವುಗಳ ಹೋಲಿಕೆ  

ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ಏಕಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ಅಗಲಿ ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಟ್ಟು


ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿಕಣ್ಣು ಕಪಟಗಳಿಗಾಗಿ ಬಿಸಾಟುಬಿಟ್ಟು


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ.


ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ರಯಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೇದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.


ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ ಎರಕದ ನಿಮ್ಮ ಬೊಂಬೆಗಳ ಬಂಗಾರದ ಮುಲಾಮನ್ನೂ ನೀವು ಹೊಲಸು ಮಾಡಿ ಆ ವಿಗ್ರಹಗಳನ್ನು - ತೊಲಗಿ ಎಂದು ಹೊಲೆಯಂತೆ ಬಿಸಾಟುಬಿಡುವಿರಿ.


ಇದಲ್ಲದೆ - ಅವರ ಊಟವೇ ಅವರಿಗೆ ಉರ್ಲೂ ಬೋನೂ ಎಡತಡೆಯೂ ಶಿಕ್ಷೆಯೂ ಆಗಲಿ;


ಅವರು ಯೊರ್ದನ್‍ಹೊಳೆಯವರೆಗೂ ಹೋಗಿ ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನೂ ಸಾಮಾನುಗಳನ್ನೂ ಬಿಸಾಡಿದ್ದನ್ನು ಕಂಡು ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.


ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.


ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್‍ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ದಿನವು ಹತ್ತಿರವಾಯಿತು; ಹೌದು, ಯೆಹೋವನ ದಿನ, ಕಾರ್ಮುಗಿಲಿನ ದಿನ ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯ ತೀರಿಸತಕ್ಕ ಕಾಲ.


ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು