Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 7:5 - ಕನ್ನಡ ಸತ್ಯವೇದವು J.V. (BSI)

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಕೇಡು, ಎಂದೂ ಕಾಣದ ಕೇಡು, ಇಗೋ ಬಂತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಂದರ ಮೇಲೊಂದು ದುರ್ಘಟನೆಗಳು ನಡೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 7:5
15 ತಿಳಿವುಗಳ ಹೋಲಿಕೆ  

ನೀವು ಯೆಹೋವನಿಗೆ ವಿರುದ್ಧವಾಗಿ ಯಾವ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಪೂರಾ ಹಾಳುಮಾಡುವನು; ಅಪಾಯವು ಎರಡನೆಯ ಸಲ ಉಂಟಾಗಬೇಕಾಗಿಲ್ಲ.


ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.


ಅಂಥ ಸಂಕಟವು ಲೋಕ ಹುಟ್ಟಿದ್ದು ಮೊದಲುಗೊಂಡು ಇಂದಿನವರೆಗೂ ಆಗಲಿಲ್ಲ. ಇನ್ನು ಮೇಲೆಯೂ ಆಗುವದಿಲ್ಲ.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


[ಆಹಾ, ನಮ್ಮ ದೇವರು] ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇವಿುಗೆ ಆದಂಥ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ನರಪುತ್ರನೇ, ಕರ್ತನಾದ ಯೆಹೋವನು ಇಸ್ರಾಯೇಲ್ ದೇಶಕ್ಕೆ ಹೀಗೆ ನುಡಿಯುತ್ತಾನೆ - ಪ್ರಳಯವು, ಪೂರ್ಣಪ್ರಳಯವು ದೇಶದ ಚತುರ್ದಿಕ್ಕಿನಲ್ಲಿಯೂ ಸಂಭವಿಸಿದೆ.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವದು; ಮಂಗಳವು ಸಜ್ಜನರಿಗೆ ಪ್ರತಿಫಲವಾಗುವದು.


ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ಯೆಹೂದದ ಅರಸರೇ, ಯೆರೂಸಲೇವಿುನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಮೊರ್ರೆನ್ನುವವು.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು