Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 8:12 - ಕನ್ನಡ ಸತ್ಯವೇದವು J.V. (BSI)

12 ಆಗ ಆತನು ನನಗೆ - ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟು ತಮ್ಮತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡಿಸುವ ಕೆಲಸವನ್ನು ನೋಡಿದೆಯಾ? ಯೆಹೋವನು ನಮ್ಮನ್ನು ನೋಡನು, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ ಎಂದು ಮಾತಾಡಿಕೊಳ್ಳುತ್ತಾರಷ್ಟೆ ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 8:12
21 ತಿಳಿವುಗಳ ಹೋಲಿಕೆ  

ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಆಮೇಲೆ ಆತನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


[ಆ ದುಷ್ಟನು] ತನ್ನೊಳಗೆ ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವದೇ ಇಲ್ಲ ಅಂದುಕೊಳ್ಳುತ್ತಾನೆ.


[ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.


ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ


ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಇಸ್ರಾಯೇಲ್‍ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ದೇವರು ವಿಚಾರಿಸುವದೆಲ್ಲಿ? ಪರಾತ್ಪರನು ಚಿಂತಿಸುವದುಂಟೋ ಅಂದುಕೊಳ್ಳುತ್ತಾರೆ.


ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯ ಕೃತ್ಯಗಳನ್ನು ನಡಿಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.


ಆಮೇಲೆ ಆತನು ನನಗೆ - ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ


ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಗುಪ್ತವಾಗಿ ತಮ್ಮ ದೇವರಾದ ಯೆಹೋವನಿಗೆ ವಿರೋಧವಾದ ಕೃತ್ಯಗಳನ್ನು ನಡಿಸಿದರು; ಕಾವಲುಗಾರರ ಬುರುಜುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು