Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 9:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಆತನು - ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೇಲೆ ದೇವರು ಗಟ್ಟಿಯಾದ ಧ್ವನಿಯಿಂದ ಕರೆಯುವುದು ನನಗೆ ಕೇಳಿಸಿತು: “ಪಟ್ಟಣವನ್ನು ದಂಡಿಸಲು ನೇಮಕಗೊಂಡಿರುವವರೇ, ಇಲ್ಲಿಗೆ ಬನ್ನಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಾಶದ ಆಯುಧವನ್ನು ನಿಮ್ಮ ಕೈಯಲ್ಲಿ ಹಿಡಿದುಕೊಂಡು ಬನ್ನಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 9:1
11 ತಿಳಿವುಗಳ ಹೋಲಿಕೆ  

ಆಗ, ಯಾವನನ್ನು ಕಳುಹಿಸಲಿ, ಯಾವನು ನಮಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಕೇಳಿ, ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು ಅಂದೆನು.


ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.


ದೇವರು ಯೆರೂಸಲೇಮನ್ನೂ ಸಂಹರಿಸುವದಕ್ಕೆ ದೂತನನ್ನು ಕಳುಹಿಸಿದನು; ಆದರೆ ಆ ದೂತನು ಸಂಹರಿಸುವದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಟ್ಟು ಸಂಹಾರಕದೂತನಿಗೆ - ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವದಕ್ಕಾಗಿ ಇರಿಸಿ ಅವರಿಗೆ - ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವದು ಎಂಬದಾಗಿ ಆಜ್ಞಾಪಿಸಿದ್ದನು.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು; ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದನ್ನು ಕಂಡೆನೋ ಅಂಥದನ್ನು ಕಂಡೆನು; ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತದರ್ಶನದಂಥಾ ದರ್ಶನವು ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆನು.


ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ, ತಡಮಾಡದೆ ವಲಸೆಹೋಗಿರಿ; ನಾನು ಬಡಗಲಿಂದ ವಿಪತ್ತನ್ನೂ ಘೋರನಾಶನವನ್ನೂ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು