Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 1:11 - ಕನ್ನಡ ಸತ್ಯವೇದವು J.V. (BSI)

11 ನೀವು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ - ನೀವು ಇನ್ನು ಮೂರು ದಿವಸಗಳಲ್ಲಿ ಈ ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶವನ್ನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗಬೇಕು. ಆದದರಿಂದ ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ ಎಂದು ಹೇಳಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಈ ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 1:11
9 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಮೂರು ದಿನಗಳ ಮೇಲೆ ಜನಾಧಿಪತಿಗಳು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ -


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವದಕ್ಕೆ ನೀವು ಯೊರ್ದನ್ ಹೊಳೆಯನ್ನು ದಾಟುತ್ತೀರಲ್ಲಾ.


ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.


ಸೇವಕನಾದ ಮೋಶೆ ಸತ್ತನು; ನೀನು ಈಗ ಎದ್ದು ಸಮಸ್ತ ಪ್ರಜಾಸಹಿತವಾಗಿ ಈ ಯೊರ್ದನ್ ಹೊಳೆಯನ್ನು ದಾಟಿ ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶಕ್ಕೆ ಹೋಗು.


ಆಗ ಯೆಹೋಶುವನು ಜನಾಧಿಪತಿಗಳಿಗೆ -


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು