Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್‍ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲರು ಧಾಳಿಮಾಡಿದಾಗ ಯೆಹೋವನು ಆ ಶತ್ರು ಸೈನ್ಯವನ್ನು ಗಾಬರಿಗೊಳಿಸಿದನು. ಆದ್ದರಿಂದ ಇಸ್ರೇಲಿನ ಸೈನಿಕರು ಅವರನ್ನು ಸೋಲಿಸಿ ಮಹಾವಿಜಯವನ್ನು ಸಾಧಿಸಿದರು. ಇಸ್ರೇಲರು ಶತ್ರುಗಳನ್ನು ಗಿಬ್ಯೋನಿನಿಂದ ಬೇತ್‌ಹೋರೋನಿಗೆ ಹೋಗುವ ದಾರಿಯವರೆಗೂ ಬೆನ್ನಟ್ಟಿದರು. ಇಸ್ರೇಲರು ಅಜೇಕ ಮತ್ತು ಮಕ್ಕೇದದವರೆಗೆ ಅವರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:10
29 ತಿಳಿವುಗಳ ಹೋಲಿಕೆ  

ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿಬಿಟ್ಟನು; ಸಿಡಿಲುಗಳಿಂದ ಕಳವಳಗೊಳಿಸಿದನು.


ಎಫ್ರಾಯೀಮ್ ಗೋತ್ರಗಳ ದೇಶದ [ದಕ್ಷಿಣ ದಿಕ್ಕಿನ] ಮೇರೆಯು ಅಟಾರೋತದ್ದಾರಿನ ಪೂರ್ವದಿಕ್ಕಿನಿಂದ ತೊಡಗಿ ಮೇಲಿನ ಬೇತ್‍ಹೋರೋನಿನ ಮೇಲೆ ಸಮುದ್ರತೀರಕ್ಕೆ ಹೋಗಿ ಅಲ್ಲಿ ಮುಗಿಯುತ್ತದೆ.


ಅಲ್ಲಿಂದ ಇಳಿದು ಪಶ್ಚಿಮದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತವನ್ನು ಮುಟ್ಟಿ ಕೆಳಗಿನ ಬೇತ್‍ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುತ್ತದೆ.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಯೆಹೋವನು ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ಬಲಿಕೊಟ್ಟನು. ಸೀಸೆರನು ರಥದಿಂದ ಹಾರಿ ಓಡಿಹೋದನು.


ತಪ್ಪೂಹ, ಏನಾಮ್, ಯರ್ಮೂತ್,


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಬಾಬೆಲಿನ ಅರಸನ ಸೈನ್ಯವು ಯೆರೂಸಲೇವಿುಗೂ ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಿಗಾಗಿ ಉಳಿದಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನಮ್ಮ ಪಿತೃಗಳಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ; ಅವರ ಭುಜಬಲವೇ ಅವರಿಗೆ ಜಯಕೊಡಲಿಲ್ಲ. ನಿನ್ನ ಭುಜಬಲ, ಹಸ್ತ, ಪ್ರಸನ್ನತೆ ಇವೇ ಅವರಿಗೆ ಜಯವನ್ನುಂಟುಮಾಡಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.


ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದನು.


ಇನ್ನೊಂದು ಬೇತ್‍ಹೋರೋನಿನ ಕಡೆಗೂ ಮತ್ತೊಂದು ಜೆಬೋಯೀಮ್ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು.


ಗೆಜೆರ್, ಕಿಬ್‍ಚೈಮ್, ಬೇತ್‍ಹೋರೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳೂ,


ಗೆದೇರೋತ್, ಬೇತ್‍ದಾಗೋನ್, ನಾಮಾ, ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;


ಮಕ್ಕೇದದ ಅರಸನು 1; ಬೇತೇಲಿನ ಅರಸನು 1;


ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.


ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು.


ನಿಮ್ಮ ದೇವರಾದ ಯೆಹೋವನು ಅವರನ್ನು ನಿವ್ಮಿುಂದ ಸೋಲಿಸಿ ಬಹಳವಾಗಿ ಗಲಿಬಿಲಿಮಾಡಿ ಕಡೆಗೆ ಇಲ್ಲದಂತೆ ಮಾಡುವನು.


ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.


ಫಿಲಿಷ್ಟಿಯರು ಯುದ್ಧಮಾಡುವದಕ್ಕೋಸ್ಕರ ಯೆಹೂದದೇಶದ ಸೋಕೋವಿನಲ್ಲಿ ಸೈನ್ಯವನ್ನು ಕೂಡಿಸಿಕೊಂಡು ಬಂದು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀವಿುನಲ್ಲಿ ಪಾಳೆಯ ಮಾಡಿಕೊಂಡರು.


ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದರಿಸಿ ಬಿಟ್ಟನು; ಸಿಡಿಲಿನಿಂದ ಕಳವಳಗೊಳಿಸಿದನು.


ಸೊಲೊಮೋನನು ಗೆಜೆರ್‍ಪಟ್ಟಣದ ಹೊರತಾಗಿ ಕೆಳಗಿನ ಬೇತ್‍ಹೋರೋನ್,


ಸರ್ವಶಕ್ತನು ಅಲ್ಲಿ ರಾಜರನ್ನು ಚದರಿಸಿದಾಗ ಸಲ್ಮೋನಿನ ಮೇಲೆ ಹಿಮವು ಬಿದ್ದಿತು.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.


ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು ಸಮಾರ್ಯಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಯೆಹೂದಪಟ್ಟಣಗಳ ಮೇಲೆ ಬಿದ್ದು ಮೂರು ಸಾವಿರ ಜನರನ್ನು ಕೊಂದು ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.


ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರಿದ ಮೋಡ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.


ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು