Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಲ್ಲಿ ಒಂದು ವಿಜ್ಞಾಪನೆ ಮಾಡಿಕೊಂಡನು. “ಸೂರ್ಯನೇ, ನೀನು ಗಿಬ್ಯೋನಿನಲ್ಲೇ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲೇ ನಿಲ್ಲು” ಎಂದು ಇಸ್ರಾಯೇಲ್ಯರ ಸಮಕ್ಷಮದಲ್ಲಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದಿನ ಯೆಹೋವನ ಸಹಾಯದಿಂದ ಇಸ್ರೇಲರು ಅಮೋರಿಯರನ್ನು ಸೋಲಿಸಿದರು. ಅಂದು ಯೆಹೋಶುವನು ಎಲ್ಲ ಜನರ ಎದುರಿಗೆ ನಿಂತುಕೊಂಡು ಯೆಹೋವನಿಗೆ ಹೀಗೆ ಮೊರೆಯಿಟ್ಟನು: “ಸೂರ್ಯನೇ, ಗಿಬ್ಯೋನಿನ ಆಕಾಶದಲ್ಲಿ ನಿಂತಿರು, ಚಲಿಸಬೇಡ. ಚಂದ್ರನೇ, ಅಯ್ಯಾಲೋನ್ ಕಣಿವೆಯ ಆಕಾಶದಲ್ಲಿ ನಿಂತಿರು, ಚಲಿಸಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:12
29 ತಿಳಿವುಗಳ ಹೋಲಿಕೆ  

ನಿನ್ನ ಹಾರುವ ಬಾಣಗಳ ಬೆಳಗಿಗೂ ನಿನ್ನ ವಿುಂಚುವ ಈಟಿಯ ಹೊಳಪಿಗೂ ಸೂರ್ಯಚಂದ್ರರು ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.


ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.


ನಿನ್ನ ಸೂರ್ಯನು ಇನ್ನು ಮುಣುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು.


ಯೆಹೋವನು ಈಗ ಅಪರೂಪವಾದ ತನ್ನ ಕೆಲಸವನ್ನು ನಡಿಸಬೇಕೆಂತಲೂ ಅಪೂರ್ವವಾದ ತನ್ನ ಕಾರ್ಯವನ್ನು ನೆರವೇರಿಸಬೇಕೆಂತಲೂ ಪೆರಾಚೀಮ್ ಬೆಟ್ಟದಲ್ಲಿ ಎದ್ದಂತೆ ಏಳುವನು, ಗಿಬ್ಯೋನ್ ತಗ್ಗಿನಲ್ಲಿ ರೋಷಗೊಂಡಂತೆ ರೋಷಗೊಳ್ಳುವನು.


ಆದರೂ ಅವುಗಳ ಪ್ರಭುತ್ವವು ಭೂವಿುಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‍‍‍ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.


ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.


ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶ ಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂಬಾರದು ನಮಸ್ಕರಿಸಲೂಬಾರದು.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.


ಹಗಲಿರುಳುಗಳಿಗೆ ನಿಯಾಮಕನು ನೀನು; ಸೂರ್ಯಾದಿ ಜ್ಯೋತಿರ್ಮಂಡಲಗಳ ನಿರ್ಮಾಣಕನು ನೀನು.


ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,


ಅನ್ಯದೇವರುಗಳನ್ನಾಗಲಿ ಇಲ್ಲವೆ ಪೂಜಿಸಬಾರದೆಂದು ಆತನು ನಿಷೇಧಿಸಿರುವ ಸೂರ್ಯಚಂದ್ರನಕ್ಷತ್ರಗಳನ್ನಾಗಲಿ ಸೇವಿಸಿ ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದುಷ್ಟವಾದದ್ದನ್ನು ನಡಿಸಿದರೆ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ಅವರನ್ನು ಪಾಲಿಸಿದನಂತರ ಮರಣ ಹೊಂದಿದನು. ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.


ನಕ್ಷತ್ರಗಳೂ ಆಕಾಶಪಥದಲ್ಲಿದ್ದು ಸೀಸೆರನೊಡನೆ ಯುದ್ಧಮಾಡಿದವು.


ಆ ದಿವಸ ಜನರು ವಿುಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದದರಿಂದ


ಒಂದು ದಿವಸ ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿವಿುನಿಂದ ಹೊರಟು ಗಿಬ್ಯೋನಿಗೆ ಬಂದರು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು.


ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು -


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಅಯ್ಯಾಲೋನ್, ಗತ್ ರಿಮ್ಮೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳೂ,


ಆತನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರೂ ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು ಸಮುವೇಲನನ್ನು -


ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಯೆಹೋವನಿಂದ ಗುರುತು ಕೇಳುತ್ತೀ; ಹಾಗಾದರೆ ನೆರಳು ಹತ್ತು ಮೆಟ್ಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು ಅಂದನು.


ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು.


ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ.


ಅಜೇಕ, ಚೊರ್ಗ, ಅಯ್ಯಾಲೋನ್, ಹೆಬ್ರೋನ್ ಇವೇ. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು