Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:13 - ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‍‍‍ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್‌ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯನು ಮುಳುಗಲು ಆತುರ ಪಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿಯೇ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಇದನ್ನು ‘ಯಾಷಾರ್’ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯ ಮುಳುಗಲು ಆತುರಪಡದೆ ಹೆಚ್ಚುಕಡಿಮೆ ಒಂದು ದಿನವೆಲ್ಲ ಆಕಾಶದ ಮಧ್ಯದಲ್ಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದ್ದರಿಂದ ಅವರು ಶತ್ರುಗಳನ್ನು ಸೋಲಿಸುವವರೆಗೆ ಸೂರ್ಯನೂ ಚಲಿಸಲಿಲ್ಲ, ಚಂದ್ರನೂ ಚಲಿಸಲಿಲ್ಲ. ಈ ಕಥೆಯು ಯಾಷಾರ್ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಸೂರ್ಯನು ಆಕಾಶದ ಮಧ್ಯದಲ್ಲಿ ನಿಂತನು. ಅವನು ಇಡೀ ದಿನ ಚಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರ್ ಪುಸ್ತಕದಲ್ಲಿ ಬರೆದಿದೆ. ಹೀಗೆ ಸೂರ್ಯ ಅಸ್ತಮಿಸಲು ತ್ವರೆಮಾಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:13
29 ತಿಳಿವುಗಳ ಹೋಲಿಕೆ  

ನಿನ್ನ ಹಾರುವ ಬಾಣಗಳ ಬೆಳಗಿಗೂ ನಿನ್ನ ವಿುಂಚುವ ಈಟಿಯ ಹೊಳಪಿಗೂ ಸೂರ್ಯಚಂದ್ರರು ತಮ್ಮ ಗೂಡಿನಲ್ಲಿ ಅಡಗಿಕೊಳ್ಳುತ್ತಾರೆ.


ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.


ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿವಸವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.


ಆಗ ಸಂಸೋನನು ಯೆಹೋವನಿಗೆ - ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು ಎಂದು ಮೊರೆಯಿಟ್ಟು


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ.


ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;


ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ.


ಆದರೂ ಅವುಗಳ ಪ್ರಭುತ್ವವು ಭೂವಿುಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.


ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕೆಂದೂ ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವದಕ್ಕೆ ಸಿದ್ಧರಾಗಿರಬೇಕೆಂದೂ ಅಪ್ಪಣೆಮಾಡಿದನು.


ಅದನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಈ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ -


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಇಸ್ರಾಯೇಲ್ಯರಲ್ಲಿ ಸೇನಾನಾಯಕರು ಎದ್ದಿದ್ದಾರೆ; ಜನರು ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ್ದಾರೆ, ಯೆಹೋವನನ್ನು ಕೊಂಡಾಡಿರಿ.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.


ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ


ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು.


ಹುಟ್ಟಬೇಡವೆಂದು ಆತನು ಅಪ್ಪಣೆಕೊಟ್ಟರೆ ಸೂರ್ಯನು ಹುಟ್ಟುವದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು