Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 10:6 - ಕನ್ನಡ ಸತ್ಯವೇದವು J.V. (BSI)

6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 10:6
14 ತಿಳಿವುಗಳ ಹೋಲಿಕೆ  

ತಾವು ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದು ಅವನಿಗೂ ಇಸ್ರಾಯೇಲ್ಯರಿಗೂ - ನಾವು ದೂರದೇಶದಿಂದ ಬಂದೆವು; ನೀವು ನಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳಿರಿ ಎಂದು ಹೇಳಿದರು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ಇಳುಕೊಂಡಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕ ಹಬ್ಬವನ್ನು ಆಚರಿಸಿ


ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಪರ್ವತಗಳು ಯೆರೂಸಲೇವಿುನ ಸುತ್ತಲೂ ಹೇಗೋ ಹಾಗೆಯೇ ಯೆಹೋವನು ಇಂದಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.


ಆಕೆಯು ಚಿಂತೆಯಿಲ್ಲ ಎಂದು ಹೇಳಿ ಕತ್ತೆಗೆ ತಡಿಹಾಕಿಸಿ ಕೂತುಕೊಂಡು ಸೇವಕನಿಗೆ - ಹೊಡೆ, ಓಡಿಸುತ್ತಾ ಬಾ; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ ಎಂದು ಆಜ್ಞಾಪಿಸಿದಳು.


ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬವಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ.)


ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿಯೂ ಉಪಾಧಿಕಾರಿಗಳನ್ನಾಗಿಯೂ ನೇವಿುಸಿದೆನು.


ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರೂ ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಇವರೂ ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ ಎಂದು ತಿಳಿಸಿದರು.


ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.


ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.


ಅವರು ಯೆಹೋಶುವನಿಗೆ - ನಾವು ನಿನ್ನ ದಾಸರಾಗಿದ್ದೇವೆನ್ನಲು ಅವನು ಅವರನ್ನು - ನೀವು ಯಾರು, ಎಲ್ಲಿಯವರು ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು