Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:20 - ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಾವು ಶಕ್ತಿಶಾಲಿಗಳೆಂಬ ಭಾವನೆಯನ್ನು ಯೆಹೋವನು ಆ ಜನರಲ್ಲಿ ಹುಟ್ಟಿಸಿ ಅವರನ್ನು ಇಸ್ರೇಲರ ಮೇಲೆ ಯುದ್ಧಕ್ಕೆ ಬರಮಾಡಿದನು. ಯುದ್ಧದಲ್ಲಿ ಕರುಣೆಯಿಲ್ಲದೆ ಅವರನ್ನು ಸಂಹರಿಸಬೇಕೆಂಬುದು ಯೆಹೋವನ ಯೋಜನೆಯಾಗಿತ್ತು. ಯೆಹೋವನು ಮೋಶೆಗೆ ಹೇಳಿದ ರೀತಿಯಲ್ಲಿ ಯೆಹೋಶುವನು ಆ ಪಟ್ಟಣಗಳನ್ನು ನಾಶಮಾಡಲು ಇದರಿಂದ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:20
24 ತಿಳಿವುಗಳ ಹೋಲಿಕೆ  

ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬದು ಅವನ ತಂದೆತಾಯಿಗಳಿಗೆ ಗೊತ್ತಿದ್ದಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರ ಮೇಲೆ ದೊರೆತನ ನಡಿಸುತ್ತಿದ್ದರು.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ


ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಯೋಗದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮಮಾಡುವದಕ್ಕೋಸ್ಕರ ಯೇಹುವಿಗೆ ರಾಜ್ಯಾಭಿಷೇಕ ಮಾಡಿಸಿದ್ದನು.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಯೆಹೋವನು ಸಕಲ ಜನಾಂಗಗಳಲ್ಲಿ ಕೋಪಮಾಡಿ ಅವುಗಳ ಸೈನ್ಯದ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ನಿಶ್ಶೇಷವಾಗಿ ಸಂಹರಿಸಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು