Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:21 - ಕನ್ನಡ ಸತ್ಯವೇದವು J.V. (BSI)

21 ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದೇ ಕಾಲದಲ್ಲಿ ಯೆಹೋಶುವನು ಮಲೆನಾಡುಗಳಾದ ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಹಾಗೂ ಇಸ್ರಾಯೇಲ್ ಪ್ರಾಂತ್ಯದ ಬೆಟ್ಟಗಳಲ್ಲಿಯೂ ವಾಸವಾಗಿದ್ದ ಅನಾಕ್ಯರನ್ನು (ಉನ್ನತ ಪುರುಷರು) ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಅನಾಕ ವಂಶಸ್ಥರು ಹೆಬ್ರೋನ್, ದೆಬೀರ್, ಅನಾಬ್ ಮತ್ತು ಯೆಹೂದ ಬೆಟ್ಟಪ್ರದೇಶಗಳಲ್ಲಿ ವಾಸವಾಗಿದ್ದರು. ಯೆಹೋಶುವನು ಈ ಅನಾಕ ವಂಶಸ್ಥರೊಂದಿಗೆ ಯುದ್ಧ ಮಾಡಿದನು. ಯೆಹೋಶುವನು ಆ ಎಲ್ಲ ಜನರನ್ನು ಮತ್ತು ಊರುಗಳನ್ನು ನಾಶಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:21
18 ತಿಳಿವುಗಳ ಹೋಲಿಕೆ  

ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ಆಗ ಇಗೋ, ಒಂದು ಬಿಳಿ ಕುದುರೆ ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಬಿಲ್ಲು ಇತ್ತು; ಅವನಿಗೆ ಜಯಮಾಲೆ ಕೊಡಲ್ಪಟ್ಟಿತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.


ಅವರು ಬಲಿಷ್ಠರೂ ಬಹುಜನವೂ ಅನಾಕ್ಯರಂತೆ ಉನ್ನತರಾದವರೂ ಆಗಿದ್ದರು.


ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು