Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 11:22 - ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರ ಪ್ರಾಂತ್ಯಗಳಲ್ಲಿ ಯಾರೊಬ್ಬರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್, ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲಿನ ಪ್ರದೇಶದಲ್ಲಿ ಅನಾಕ ವಂಶಸ್ಥರಲ್ಲಿ ಯಾರೂ ಉಳಿಯಲಿಲ್ಲ. ಜೀವಸಹಿತ ಉಳಿದ ಅನಾಕ ವಂಶಸ್ಥರು ಕೇವಲ ಗಾಜಾ, ಗತೂರು, ಅಷ್ಡೋದ್ ಎಂಬಲ್ಲಿ ಮಾತ್ರ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 11:22
19 ತಿಳಿವುಗಳ ಹೋಲಿಕೆ  

ಉಭಯರ ಮಧ್ಯದಲ್ಲಿ ಒಂದು ತಗ್ಗು ಇತ್ತು. ಫಿಲಿಷ್ಟಿಯರ ಪಾಳೆಯದಿಂದ ಗತ್ ಊರಿನವನಾದ ಗೊಲ್ಯಾತನೆಂಬ ಒಬ್ಬ ರಣಶೂರನು ಹೊರಟುಬಂದನು. ಅವನು ಆರುವರೆ ಮೊಳ ಎತ್ತರವಾಗಿದ್ದನು.


ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತಗ್ರಾಮಗಳು;


ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ಡೋದಿಗೆ ಬಂದು ಅದನ್ನು ಮುತ್ತಿಹಿಡಿದ ವರುಷದಲ್ಲಿ


ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.


ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ ಗತ್ ಊರಿನವರನ್ನು ಓಡಿಸಿಬಿಟ್ಟವರೂ ಆದ ಬೆರೀಯ, ಶಮ ಇವರೂ.


ಮೂರು ವರುಷಗಳಾದನಂತರ ಶಿಮ್ಮಿಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ


ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‍ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.


ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ ಹಾಗೆಯೇ ಯೆಹೋವನು ರೆಫಾಯರನ್ನು ಅಮ್ಮೋನಿಯರ ಎದುರಿನಿಂದ ಹೊರಡಿಸಿದನು; ಅಮ್ಮೋನಿಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.


ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು