Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 12:8 - ಕನ್ನಡ ಸತ್ಯವೇದವು J.V. (BSI)

8 ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಬೆಟ್ಟಗಳ ಬುಡದಲ್ಲಿರುವ ಸೀಮೆ, ಅರಣ್ಯ, ದಕ್ಷಿಣಪ್ರಾಂತ್ಯ ಇವುಗಳಲ್ಲಿ ಆಳುತ್ತಿದ್ದ ಹಿತ್ತಿಯ ಅಮೋರಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ಅರಸರನ್ನು ಸೋಲಿಸಿ ಅವರ ದೇಶಗಳನ್ನು ಇಸ್ರಾಯೇಲ್ ಕುಲಭಾಗಗಳಿಗೆ ಸ್ವಾಸ್ತ್ಯವಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪರ್ವತ ಪ್ರದೇಶ, ಪಶ್ಚಿಮದಿಕ್ಕಿನ ಇಳಿಜಾರು ಪ್ರದೇಶ, ಜೋರ್ಡನ್ ಕಣಿವೆ, ಪೂರ್ವದಿಕ್ಕಿನ ಬೆಟ್ಟಗಳು, ಮರುಭೂಮಿ ಮತ್ತು ನೆಗೆವ್ ಇದರಲ್ಲಿ ಸೇರಿಕೊಂಡಿದ್ದವು. ಈ ಪ್ರದೇಶವು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ವಾಸಸ್ಥಾನವಾಗಿತ್ತು. ಇಸ್ರೇಲರು ಸೋಲಿಸಿದ ಅರಸರ ಪಟ್ಟಿಯು ಇಂತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 12:8
14 ತಿಳಿವುಗಳ ಹೋಲಿಕೆ  

ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ಯೊರ್ದನ್ ಹೊಳೆಯ ಆಚೆ ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ ಹಿತ್ತಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿ


ಇಸ್ರಾಯೇಲ್ಯರೇ ಕೇಳಿರಿ. ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಈ ಯೊರ್ದನ್ ಹೊಳೆಯನ್ನು ಇಂದು ದಾಟುವವರಾಗಿದ್ದೀರಿ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ನನ್ನ ದೂತನು ನಿಮ್ಮ ಮುಂದೆ ಮುಂದೆ ನಡೆದು ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು; ಅವರನ್ನಾದರೋ ನಾನು ನಿರ್ಮೂಲಮಾಡುವೆನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಹಿವ್ವಿಯರೂ ಅರ್ಕಿಯರೂ ಸೀನಿಯರೂ


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್‍ದೇಶದ ದಕ್ಷಿಣಸೀಮೆಗೆ ಮುಂದೆ ಮುಂದೆ ಹೋಗುತ್ತಾ ಇದ್ದನು.


ಇದರಿಂದ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಹುಟ್ಟಿತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ಇದ್ದರು.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು