Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:1 - ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ - ನೀನು ಈಗ ಮುದುಕನಾದಿ; ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:1
12 ತಿಳಿವುಗಳ ಹೋಲಿಕೆ  

ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರುಷಗಳೂ ಸೇರಿ ನಾಲ್ವತ್ತೈದು ವರುಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರುಷದವನಾಗಿದ್ದೇನೆ.


ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸೇನಾನಾಯಕನಾಗಿ ಹೊಳೆಯನ್ನು ದಾಟಿಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ಹೊಳೆಯನ್ನು ದಾಟಿಹೋಗುವನು.


ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗ ಯೆಹೋಶುವನು ನೂರ ಹತ್ತು ವರುಷದವನಾಗಿ ಮರಣ ಹೊಂದಿದನು.


ಆದರೆ ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ದಿನಹೋದವರಾಗಿದ್ದರು.


ಅಬ್ರಹಾಮನೂ ಸಾರಳೂ ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು. ಹೀಗಿರಲಾಗಿ ಆಕೆ -


ಅರಸನಾದ ದಾವೀದನು ದಿನ ತುಂಬಿದ ಮುದುಕನಾಗಿದ್ದನು. ಸೇವಕರು ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿದ್ದಿಲ್ಲ.


ಅವು ಯಾವವಂದರೆ - ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿದ್ದ ಉತ್ತರ ಮೇರೆಯಾದ ಎಕ್ರೋನಿನವರೆಗಿದ್ದು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯವು,


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಸಮಸ್ತ ಕಾನಾನ್‍ದೇಶವೇ ನಿಮಗೆ ಸ್ವದೇಶವಾಗುವದಕ್ಕೆ ದೊರಕುವಂಥದು.


ಅಲ್ಲಿಂದ ಅದು ಯೊರ್ದನ್ ಹೊಳೆಗೆ ಇಳಿದು [ಅದನ್ನು ಅನುಸರಿಸಿ] ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು ಅಂದನು.


ಅಗ ಯೆಹೋಶುವನು ಇಸ್ರಾಯೇಲ್ಯರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವದರಲ್ಲಿ ಇನ್ನೆಷ್ಟು ತಡಮಾಡುತ್ತೀರಿ?


ತರುವಾಯ ಯೆಹೋವನು ಯೆಹೋಶುವನನ್ನು ಕುರಿತು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು