Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:12 - ಕನ್ನಡ ಸತ್ಯವೇದವು J.V. (BSI)

12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆಯಿಂದ ತೊಡಗಿ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬೈಲಿನಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ನದಿಯಿಂದ ಯೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿನಿಂದ ಪಶ್ಚಿಮಕ್ಕೆ ಹೋಗಿ ಗಟ್ಟಾಹತ್ತಿ ಬೇತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:12
11 ತಿಳಿವುಗಳ ಹೋಲಿಕೆ  

ಯೋಸೇಫನ ವಂಶದವರಿಗೆ ದೊರಕಿದ ಸ್ವಾಸ್ತ್ಯದ ಮೇರೆಯು ಯೆರಿಕೋವಿನ ಬಳಿಯಲ್ಲಿ ಯೊರ್ದನ್ ತೀರದಿಂದ ತೊಡಗಿ ಯೆರಿಕೋವಿನ ಪೂರ್ವದಲ್ಲಿದ್ದ ಹಳ್ಳ, ಯೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಬೆಟ್ಟದ ಸೀಮೆಯ ಅರಣ್ಯ,


ಯೆಹೋಶುವನು ಜನರನ್ನು ಕರೆದು - ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ಆಯಿ ಎಂಬ ಪ್ರಾಂತವನ್ನು ಸಂಚರಿಸಿ ನೋಡಿರಿ ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ನೋಡಿ


ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ದಿಗಿಲುಪಡುವರು; ಅದರ ಭಕ್ತಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ಅದರಿಂದ ತೊಲಗಿತಲ್ಲಾ ಎಂದು ಅದರ ಪೂಜಾರಿಗಳು ಅದಕ್ಕಾಗಿ ನಡುಗುವರು.


ಗಿಬ್ಯದಲ್ಲಿ ತುತೂರಿಯನ್ನೂದಿರಿ, ರಾಮದಲ್ಲಿ ಕೊಂಬು ಕೂಗಲಿ, ಬೇತಾವೆನಿನಲ್ಲಿ ಆರ್ಭಟಿಸಿರಿ,


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


(ಯೆರಿಕೋವಿನವರು ಇಸ್ರಾಯೇಲ್ಯರಿಗೆ ಹೆದರಿ ತಮ್ಮ ಪಟ್ಟಣದ ಬಾಗಲುಗಳನ್ನು ಭದ್ರವಾಗಿ ಮುಚ್ಚಿಕೊಂಡರು. ಯಾರೂ ಒಳಗೆ ಹೋಗಲಿಲ್ಲ; ಹೊರಗೆ ಬರಲಿಲ್ಲ.)


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯ ಮಾರ್ಗವಾಗಿ ಓಡತೊಡಗಿದರು.


ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತಗಳ ಮಧ್ಯದಲ್ಲಿರುತ್ತದೆ.


ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು