Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:14 - ಕನ್ನಡ ಸತ್ಯವೇದವು J.V. (BSI)

14 ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:14
18 ತಿಳಿವುಗಳ ಹೋಲಿಕೆ  

ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ಬಹುಮಂದಿ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ; ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ವಿುತ್ರನುಂಟು.


ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಡೆಯುವದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ತಿರುಗಿಕೊಂಡು ಹೋಗುವೆನು ಅಂದನು.


ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು.


[ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು


ಸೇವಕನ ಮೇಲೆ ದಯವಿರಲಿ. ನೀನು ಯೆಹೋವನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿಯಲ್ಲಾ; ನಾನು ಅಪರಾಧಿಯಾಗಿದ್ದರೆ ನನ್ನನ್ನು ನಿನ್ನ ತಂದೆಗೆ ಒಪ್ಪಿಸುವದೇಕೆ? ನೀನೇ ಕೊಂದುಹಾಕು ಎಂದು ಹೇಳಿದನು.


ಸೂಳೆಯಾದ ರಾಹಾಬಳು ಯೆರಿಕೋ ಪಟ್ಟಣವನ್ನು ಸಂಚರಿಸಿನೋಡುವದಕ್ಕೆ ಬಂದಿದ್ದ ಯೆಹೋಶುವನ ದೂತರನ್ನು ಅಡಗಿಸಿಟ್ಟದರಿಂದ ಅವನು ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿರುವದೆಲ್ಲವನ್ನೂ ಉಳಿಸಿದನು. ಅವಳು ಇಂದಿನವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿದ್ದಾಳೆ.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ನನ್ನ ತಂದೆತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವದೆಲ್ಲವನ್ನೂ ನಾಶಮಾಡದೆ ಉಳಿಸುವದಾಗಿಯೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ ಎಂಬದೇ.


ಅವಳ ಮನೆಯು ಊರುಗೋಡೆಯ ಮೇಲಿದ್ದದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ - ನೀವು ಹಿಂದಟ್ಟುವವರಿಗೆ ಸಿಕ್ಕದಂತೆ


ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ.


ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ.


ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.


ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ; ಸುಯುಕ್ತಿಯುಳ್ಳವರು ಪ್ರೀತಿಸತ್ಯತೆಗಳಿಗೆ ಪಾತ್ರರು.


ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ - ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು