Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇವರ ಬಳಿಗೆ ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಆದರೆ ಮೊದಲು ಇಸ್ರೇಲರು ರೂಬೇನ್ಯರ, ಗಾದ್ಯರ, ಮನಸ್ಸೆಕುಲದ ಅರ್ಧಜನರ ಸಂಗಡ ಮಾತನಾಡಲು ಕೆಲವು ಜನರನ್ನು ಕಳುಹಿಸಿದರು. ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನ ನೇತೃತ್ವದಲ್ಲಿ ಪ್ರತಿಯೊಂದು ಕುಲದಿಂದ ಒಬ್ಬೊಬ್ಬ ವ್ಯಕ್ತಿಯಂತೆ ಹತ್ತು ಜನರನ್ನು ಕಳುಹಿಸಿದರು. ಈ ಹತ್ತು ಜನರು ತಮ್ಮ ಕುಲಗಳ ಮುಖ್ಯ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:13
15 ತಿಳಿವುಗಳ ಹೋಲಿಕೆ  

ಕೂಡಲೆ ಮಾಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಯಲ್ಲಿ ಹಿಡಿದು


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವದರಿಂದ ಇಸ್ರಾಯೇಲ್ಯರು - ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ - ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು ಅಂದನು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳೊಳಗೆ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ - ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?


ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯವು ಇಸ್ರಾಯೇಲ್ಯರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನಿಗೆ - ದೇವರ ಸಾಮಾನುಗಳನ್ನೂ ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ಆರೋನನ ಮಗನಾದ ಎಲ್ಲಾಜಾರನೂ ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಅವರು ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶಗಳನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡು


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು; ಯೆಹೋವನು ಇವನ ಸಂಗಡ ಇದ್ದನು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು